Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಇನ್ಸೂರೆನ್ಸ್ ಹಣಕ್ಕಾಗಿ ಇಬ್ಬರು ಗಂಡು ಮಕ್ಕಳು ಜನ್ಮವಿತ್ತ ತಂದೆಗೆ ಹಾವಿನಿಂದ ಕಚ್ಚಿಸಿ ಕೊಂದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯಪೊಡತೂರ್ಪೇಟೆ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅಕ್ಟೋಬರ್ 22 ರಂದು ತಮಿಳುನಾಡಿನ ಪೊಥಟ್ಟೂರ್ಪೆಟ್ಟೈ ಠಾಣೆಯ ಪೊಲೀಸರಿಗೆ, ತಿರುತ್ತಣಿ ಸರ್ಕಾರಿ ಶಾಲೆಯ ಲ್ಯಾಬ್ನ ಸಹಾಯಕ ಇ.ಪಿ.ಗಣೇಶ್ (56) ಅನ್ನೋರು ಹಾವು ಕಡಿತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಗುತ್ತದೆ. ಇ.ಪಿ ಗಣೇಶ್ ಪುತ್ರ ಜಿ ಮೋಹನ್ ರಾಜ್ (29) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆಯ ಆರಂಭಿಕ ಹಂತದಲ್ಲಿ ಆಕಸ್ಮಿಕ ಹಾವು ಕಡಿತದಿಂದಲೇ ಮೃತಪಟ್ಟಿದ್ದಾರೆ ಎಂದು ಬಿಂಬಿಸಲಾಗಿತ್ತು.
ಮೃತಪಟ್ಟ ಕೆಲವು ದಿನಗಳು ಕಳೆದ ನಂತರ ಇ.ಪಿ.ಗಣೇಶ್ ಕುಟುಂಬವು ಇನ್ಶೂರೆನ್ಸ್ ಹಣಕ್ಕಾಗಿ ಅರ್ಜಿ ಸಲ್ಲಿಸಿತ್ತು. ಒಂದೆಲ್ಲ ಎರಡಲ್ಲ ಬರೋಬ್ಬರಿ ಮೂರು ಕೋಟಿಗಾಗಿ ಕುಟುಂಬದ ಸದಸ್ಯರು ಕ್ಲೈಮ್ ಮಾಡಿದ್ದರು. ಇದರಿಂದ ಅನುಮಾನಗೊಂಡ ಇನ್ಶೂರೆನ್ಸ್ ಕಂಪನಿ, ತಮಿಳುನಾಡಿನ ಉತ್ತರ ವಲಯದ ಪೊಲೀಸ್ ಮಹಾ ನಿರ್ದೇಶಕ ಆಸ್ರಾ ಗಾರ್ಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿತ್ತು.
ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸುತ್ತಾರೆ. ಈ ತನಿಖಾ ತಂಡವು ಇ.ಪಿ.ಗಣೇಶ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತದೆ. ತನಿಖೆ ವೇಳೆ ಕುಟುಂಬವು ವಿವಿಧ ಮೂಲಗಳಿಂದ ಸಾಲ ಮಾಡಿರುವ ಸುಳಿವು ಸಿಗುತ್ತದೆ. ಜೊತೆಗೆ ಕುಟುಂಬವು ಭಾರೀ ಮೌಲ್ಯದ ವಿಮಾ ಪಾಲಿಸಿಯನ್ನೂ ಪಡೆದಿರೋದು ಗೊತ್ತಾಗುತ್ತದೆ. ಕುಟುಂಬದ ಆದಾಯದ ಮೂಲ ಹಾಗೂ ವಿಮಾ ಪಾಲಿಸಿಯ ಮೊತ್ತಗಳನ್ನು ಗಮನಿಸಿದಾಗ ತನಿಖಾಧಿಕಾರಿಗಳಿಗೆ ಅನುಮಾನ ಕಾಡುತ್ತದೆ.
ಇದೇ ಕಾರಣಕ್ಕೆ ಪೊಲೀಸರು ತಮ್ಮದೇ ಶೈಲಿಯಲ್ಲಿ ತನಿಖೆ ನಡೆಸಿದಾಗ ಇ.ಪಿ.ಗಣೇಶ್ ಇಬ್ಬರು ಮಕ್ಕಳಾದ ಮೋಹನ್ ರಾಜ್ ಮತ್ತು ಹರಿಹರನ್, ವಿಮಾ ಹಣ ಪಡೆಯುವ ಉದ್ದೇಶದಿಂದ ತಂದೆಯನ್ನು ಹತ್ಯೆ ಮಾಡಿರುವ ಸತ್ಯವನ್ನು ಬಾಯಿಬಿಟ್ಟಿದ್ದಾರೆ.
https://youtube.com/shorts/fv7pxj3vfzA?si=VOes1ukzBu4N5_Xx