Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಗೆ ಹಾವು ಕಡಿಸಿ ಕೊಂದ ಗಂಡು ಮಕ್ಕಳು!
ದೇಶ

3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಗೆ ಹಾವು ಕಡಿಸಿ ಕೊಂದ ಗಂಡು ಮಕ್ಕಳು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇನ್ಸೂರೆನ್ಸ್ ಹಣಕ್ಕಾಗಿ ಇಬ್ಬರು ಗಂಡು ಮಕ್ಕಳು ಜನ್ಮವಿತ್ತ ತಂದೆಗೆ ಹಾವಿನಿಂದ ಕಚ್ಚಿಸಿ ಕೊಂದ  ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯಪೊಡತೂರ್ಪೇಟೆ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಅಕ್ಟೋಬರ್ 22 ರಂದು ತಮಿಳುನಾಡಿನ ಪೊಥಟ್ಟೂರ್‌ಪೆಟ್ಟೈ ಠಾಣೆಯ ಪೊಲೀಸರಿಗೆ, ತಿರುತ್ತಣಿ ಸರ್ಕಾರಿ ಶಾಲೆಯ ಲ್ಯಾಬ್​ನ ಸಹಾಯಕ ಇ.ಪಿ.ಗಣೇಶ್​ (56) ಅನ್ನೋರು ಹಾವು ಕಡಿತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಗುತ್ತದೆ. ಇ.ಪಿ ಗಣೇಶ್ ಪುತ್ರ ಜಿ ಮೋಹನ್ ರಾಜ್ (29) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆಯ ಆರಂಭಿಕ ಹಂತದಲ್ಲಿ ಆಕಸ್ಮಿಕ ಹಾವು ಕಡಿತದಿಂದಲೇ ಮೃತಪಟ್ಟಿದ್ದಾರೆ ಎಂದು ಬಿಂಬಿಸಲಾಗಿತ್ತು.

ಮೃತಪಟ್ಟ ಕೆಲವು ದಿನಗಳು ಕಳೆದ ನಂತರ ಇ.ಪಿ.ಗಣೇಶ್ ಕುಟುಂಬವು ಇನ್ಶೂರೆನ್ಸ್ ಹಣಕ್ಕಾಗಿ ಅರ್ಜಿ ಸಲ್ಲಿಸಿತ್ತು. ಒಂದೆಲ್ಲ ಎರಡಲ್ಲ ಬರೋಬ್ಬರಿ ಮೂರು ಕೋಟಿಗಾಗಿ ಕುಟುಂಬದ ಸದಸ್ಯರು ಕ್ಲೈಮ್​ ಮಾಡಿದ್ದರು. ಇದರಿಂದ ಅನುಮಾನಗೊಂಡ ಇನ್ಶೂರೆನ್ಸ್ ಕಂಪನಿ, ತಮಿಳುನಾಡಿನ ಉತ್ತರ ವಲಯದ ಪೊಲೀಸ್ ಮಹಾ ನಿರ್ದೇಶಕ ಆಸ್ರಾ ಗಾರ್ಗ್​​ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿತ್ತು.

ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸುತ್ತಾರೆ. ಈ ತನಿಖಾ ತಂಡವು ಇ.ಪಿ.ಗಣೇಶ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತದೆ. ತನಿಖೆ ವೇಳೆ ಕುಟುಂಬವು ವಿವಿಧ ಮೂಲಗಳಿಂದ ಸಾಲ ಮಾಡಿರುವ ಸುಳಿವು ಸಿಗುತ್ತದೆ. ಜೊತೆಗೆ ಕುಟುಂಬವು ಭಾರೀ ಮೌಲ್ಯದ ವಿಮಾ ಪಾಲಿಸಿಯನ್ನೂ ಪಡೆದಿರೋದು ಗೊತ್ತಾಗುತ್ತದೆ. ಕುಟುಂಬದ ಆದಾಯದ ಮೂಲ ಹಾಗೂ ವಿಮಾ ಪಾಲಿಸಿಯ ಮೊತ್ತಗಳನ್ನು ಗಮನಿಸಿದಾಗ ತನಿಖಾಧಿಕಾರಿಗಳಿಗೆ ಅನುಮಾನ ಕಾಡುತ್ತದೆ.

ಇದೇ ಕಾರಣಕ್ಕೆ ಪೊಲೀಸರು ತಮ್ಮದೇ ಶೈಲಿಯಲ್ಲಿ ತನಿಖೆ ನಡೆಸಿದಾಗ ಇ.ಪಿ.ಗಣೇಶ್ ಇಬ್ಬರು ಮಕ್ಕಳಾದ ಮೋಹನ್ ರಾಜ್ ಮತ್ತು ಹರಿಹರನ್, ವಿಮಾ ಹಣ ಪಡೆಯುವ ಉದ್ದೇಶದಿಂದ ತಂದೆಯನ್ನು ಹತ್ಯೆ ಮಾಡಿರುವ ಸತ್ಯವನ್ನು ಬಾಯಿಬಿಟ್ಟಿದ್ದಾರೆ.

https://youtube.com/shorts/fv7pxj3vfzA?si=VOes1ukzBu4N5_Xx

 

TAGGED:#Sons #father #snakebite #insurance #money #tamilnadu
Share This Article
Facebook Twitter Copy Link Print
Previous Article Health ಪ್ರತಿನಿತ್ಯ ನಕ್ಕರೆ ಏನಾಗತ್ತೆ?
Next Article ಬಲೂಚಿಸ್ತಾನದಲ್ಲಿ ಅವಳಿ ಬಾಂಬ್​ ಸ್ಫೋಟ; ರೈಲು ಸಂಚಾರ ಸ್ಥಗಿತ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?