Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಗೆ ಹಾವು ಕಡಿಸಿ ಕೊಂದ ಗಂಡು ಮಕ್ಕಳು!
ದೇಶ

3 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಗೆ ಹಾವು ಕಡಿಸಿ ಕೊಂದ ಗಂಡು ಮಕ್ಕಳು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇನ್ಸೂರೆನ್ಸ್ ಹಣಕ್ಕಾಗಿ ಇಬ್ಬರು ಗಂಡು ಮಕ್ಕಳು ಜನ್ಮವಿತ್ತ ತಂದೆಗೆ ಹಾವಿನಿಂದ ಕಚ್ಚಿಸಿ ಕೊಂದ  ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯಪೊಡತೂರ್ಪೇಟೆ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಅಕ್ಟೋಬರ್ 22 ರಂದು ತಮಿಳುನಾಡಿನ ಪೊಥಟ್ಟೂರ್‌ಪೆಟ್ಟೈ ಠಾಣೆಯ ಪೊಲೀಸರಿಗೆ, ತಿರುತ್ತಣಿ ಸರ್ಕಾರಿ ಶಾಲೆಯ ಲ್ಯಾಬ್​ನ ಸಹಾಯಕ ಇ.ಪಿ.ಗಣೇಶ್​ (56) ಅನ್ನೋರು ಹಾವು ಕಡಿತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಗುತ್ತದೆ. ಇ.ಪಿ ಗಣೇಶ್ ಪುತ್ರ ಜಿ ಮೋಹನ್ ರಾಜ್ (29) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆಯ ಆರಂಭಿಕ ಹಂತದಲ್ಲಿ ಆಕಸ್ಮಿಕ ಹಾವು ಕಡಿತದಿಂದಲೇ ಮೃತಪಟ್ಟಿದ್ದಾರೆ ಎಂದು ಬಿಂಬಿಸಲಾಗಿತ್ತು.

ಮೃತಪಟ್ಟ ಕೆಲವು ದಿನಗಳು ಕಳೆದ ನಂತರ ಇ.ಪಿ.ಗಣೇಶ್ ಕುಟುಂಬವು ಇನ್ಶೂರೆನ್ಸ್ ಹಣಕ್ಕಾಗಿ ಅರ್ಜಿ ಸಲ್ಲಿಸಿತ್ತು. ಒಂದೆಲ್ಲ ಎರಡಲ್ಲ ಬರೋಬ್ಬರಿ ಮೂರು ಕೋಟಿಗಾಗಿ ಕುಟುಂಬದ ಸದಸ್ಯರು ಕ್ಲೈಮ್​ ಮಾಡಿದ್ದರು. ಇದರಿಂದ ಅನುಮಾನಗೊಂಡ ಇನ್ಶೂರೆನ್ಸ್ ಕಂಪನಿ, ತಮಿಳುನಾಡಿನ ಉತ್ತರ ವಲಯದ ಪೊಲೀಸ್ ಮಹಾ ನಿರ್ದೇಶಕ ಆಸ್ರಾ ಗಾರ್ಗ್​​ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿತ್ತು.

ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸುತ್ತಾರೆ. ಈ ತನಿಖಾ ತಂಡವು ಇ.ಪಿ.ಗಣೇಶ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತದೆ. ತನಿಖೆ ವೇಳೆ ಕುಟುಂಬವು ವಿವಿಧ ಮೂಲಗಳಿಂದ ಸಾಲ ಮಾಡಿರುವ ಸುಳಿವು ಸಿಗುತ್ತದೆ. ಜೊತೆಗೆ ಕುಟುಂಬವು ಭಾರೀ ಮೌಲ್ಯದ ವಿಮಾ ಪಾಲಿಸಿಯನ್ನೂ ಪಡೆದಿರೋದು ಗೊತ್ತಾಗುತ್ತದೆ. ಕುಟುಂಬದ ಆದಾಯದ ಮೂಲ ಹಾಗೂ ವಿಮಾ ಪಾಲಿಸಿಯ ಮೊತ್ತಗಳನ್ನು ಗಮನಿಸಿದಾಗ ತನಿಖಾಧಿಕಾರಿಗಳಿಗೆ ಅನುಮಾನ ಕಾಡುತ್ತದೆ.

ಇದೇ ಕಾರಣಕ್ಕೆ ಪೊಲೀಸರು ತಮ್ಮದೇ ಶೈಲಿಯಲ್ಲಿ ತನಿಖೆ ನಡೆಸಿದಾಗ ಇ.ಪಿ.ಗಣೇಶ್ ಇಬ್ಬರು ಮಕ್ಕಳಾದ ಮೋಹನ್ ರಾಜ್ ಮತ್ತು ಹರಿಹರನ್, ವಿಮಾ ಹಣ ಪಡೆಯುವ ಉದ್ದೇಶದಿಂದ ತಂದೆಯನ್ನು ಹತ್ಯೆ ಮಾಡಿರುವ ಸತ್ಯವನ್ನು ಬಾಯಿಬಿಟ್ಟಿದ್ದಾರೆ.

https://youtube.com/shorts/fv7pxj3vfzA?si=VOes1ukzBu4N5_Xx

 

TAGGED:#Sons #father #snakebite #insurance #money #tamilnadu
Share This Article
Facebook Twitter Copy Link Print
Previous Article Health ಪ್ರತಿನಿತ್ಯ ನಕ್ಕರೆ ಏನಾಗತ್ತೆ?
Next Article ಬಲೂಚಿಸ್ತಾನದಲ್ಲಿ ಅವಳಿ ಬಾಂಬ್​ ಸ್ಫೋಟ; ರೈಲು ಸಂಚಾರ ಸ್ಥಗಿತ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?