Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com
ಗೃಹಿಣಿಯೊಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿನಡೆದಿದೆ.ಮುನ್ನಿ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ಮುನ್ನಿ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಕೌಟುಂಬಿಕ ಕಾರಣಗಳಿಂದಾಗಿ ಕಳೆದ ಆರು ತಿಂಗಳಿನಿಂದ ಪತಿಯಿಂದ ದೂರವಿದ್ದ ಮುನ್ನಿ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ಅವರಿಗೆ ಮೊಹಮ್ಮದ್ ಶೇಕ್ಷಾವಲ್ಲಿ ಎಂಬ ಯುವಕನ ಪರಿಚಯವಾಗಿ ಸ್ನೇಹ ಬೆಳೆದಿತ್ತು.ಆತ್ಮ*ಹತ್ಯೆಗೂ ಮುನ್ನ ಮುನ್ನಿ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ. ಅದರಲ್ಲಿ ತನಗಾದ ನೋವು ಮತ್ತು ಸಂಕಟಗಳನ್ನು ವಿವರಿಸುತ್ತಲೇ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾರೆ.
ಮುನ್ನಿ ಅವರ ಸಾವಿಗೆ ಮೊಹಮ್ಮದ್ ಶೇಕ್ಷಾವಲ್ಲಿ ಅವರೇ ನೇರ ಕಾರಣ ಎಂದು ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ. ಇವರಿಬ್ಬರ ನಡುವೆ ಇತ್ತೀಚೆಗೆ ದೊಡ್ಡ ಮಟ್ಟದ ವೈಮನಸ್ಸು ಉಂಟಾಗಿತ್ತು. ಇದೇ ಕಾರಣಕ್ಕೆ ಮನನೊಂದ ಮುನ್ನಿ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಅವರು ದೂರಿದ್ದಾರೆ. ಶೇಕ್ಷಾವಲ್ಲಿ ಮುನ್ನಿ ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದನೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಬಳ್ಳಾರಿಯ ಗಾಂಧಿ ನಗರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮುನ್ನಿ ರೆಕಾರ್ಡ್ ಮಾಡಿದ ವಿಡಿಯೋವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೇಳಿ ಹೋಗು ಕಾರಣ ಪುಸ್ತಕದ ಬಗ್ಗೆ ಲೇಖಕಿ ಪೂರ್ಣಿಮಾ ಹೆಗಡೆ ಹೇಳಿದ್ದೇನು?