Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ‘ಬಾಂಗ್ಲಾದೇಶದ ಪರ ನಿಂತು ಪಾಕ್ ಹೋರಾಟ ಮಾಡುತ್ತೆ ಎಂದ ಪಾಕಿಸ್ತಾನ
ದೇಶಪ್ರಮುಖವಿದೇಶ

‘ಬಾಂಗ್ಲಾದೇಶದ ಪರ ನಿಂತು ಪಾಕ್ ಹೋರಾಟ ಮಾಡುತ್ತೆ ಎಂದ ಪಾಕಿಸ್ತಾನ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಸ್ಲಾಮಾಬಾದ್: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಮುಂದಿಟ್ಟುಕೊಂಡು ಭಾರತ ದಾಳಿಗೆ ಮುಂದಾದ್ರೆ.. ಪಾಕಿಸ್ತಾನ ತನ್ನ ಸಂಪೂರ್ಣ ಬಲದೊಂದಿಗೆ ಬಾಂಗ್ಲಾದೇಶ ಪರ ನಿಂತ ಹೋರಾಟ ನಡೆಸಲಿದೆ ಎಂದು ಪಾಕಿಸ್ತಾನ ಸರ್ಕಾರ ಎಚ್ಚರಿಸಿದೆ.

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದ್ದು, ಇದರ ಬೆನ್ನಲ್ಲೇ ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸುತ್ತಿದೆ.

ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಅಸಮಾಧಾನವನ್ನು ಮತ್ತು ಶೀತಲ ಸಮರವನ್ನು ದುರುಪಯೋಗಪಡಿಸಿಕೊಳ್ಳಲು ಪಾಕ್ ಪ್ರಯತ್ನಿಸುತ್ತಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್)ನ ಯುವ ವಿಭಾಗದ ನಾಯಕ ಕಮ್ರಾನ್ ಸಯೀದ್ ಉಸ್ಮಾನಿ ಇಂದು ಭಾರತಕ್ಕೆ ಬೆದರಿಕೆ ಹಾಕಿದ್ದು, ಬಾಂಗ್ಲಾದೇಶದ ಮೇಲೆ ಭಾರತದಿಂದ ಯಾವುದೇ ದಾಳಿ ನಡೆದರೆ ಪಾಕಿಸ್ತಾನದ ಸೈನ್ಯ ಮತ್ತು ಕ್ಷಿಪಣಿಗಳು ಅದಕ್ಕೆ ಪ್ರತಿಕ್ರಿಯಿಸುತ್ತವೆ ಎಂದು ಹೇಳಿದ್ದಾರೆ.

‘ಭಾರತವು ಬಾಂಗ್ಲಾದೇಶದ ಸ್ವಾಯತ್ತತೆಯ ಮೇಲೆ ದಾಳಿ ಮಾಡಿದರೆ, ಯಾರಾದರೂ ಬಾಂಗ್ಲಾದೇಶವನ್ನು ಕೆಟ್ಟ ಉದ್ದೇಶದಿಂದ ನೋಡಲು ಧೈರ್ಯ ಮಾಡಿದರೆ ಪಾಕಿಸ್ತಾನದ ಜನರು, ಪಾಕಿಸ್ತಾನಿ ಸಶಸ್ತ್ರ ಪಡೆಗಳು ಮತ್ತು ನಮ್ಮ ಕ್ಷಿಪಣಿಗಳು ಸುಮ್ಮನಿರುವುದಿಲ್ಲ, ನಾವು ಬಾಂಗ್ಲಾದೇಶದ ಸಹಾಯಕ್ಕೆ ರೆಡಿ ಇರುತ್ತೇವೆ ಎಂಬುದನ್ನು ನೆನಪಿಡಿ’ ಎಂದು ಹೇಳಿದ್ದಾರೆ.
ಸೇನಾ ಮೈತ್ರಿಗೆ ಕರೆ ಅಲ್ಲದೆ, ಅವರು ಪಾಕಿಸ್ತಾನ (Pakistan) ಮತ್ತು ಬಾಂಗ್ಲಾದೇಶದ ನಡುವೆ ಮಿಲಿಟರಿ ಮೈತ್ರಿಗೆ ಕರೆ ನೀಡಿದ್ದು, ಬಾಂಗ್ಲಾದೇಶವನ್ನು ಭಾರತದ ಸೈದ್ಧಾಂತಿಕ ಪ್ರಾಬಲ್ಯಕ್ಕೆ ತಳ್ಳುವುದನ್ನು ಪಾಕಿಸ್ತಾನ ಒಪ್ಪುವುದಿಲ್ಲ.

ಒಂದುವೇಳೆ ಭಾರತ ಬಾಂಗ್ಲಾದೇಶದ ಮೇಲೆ ದಾಳಿ ಮಾಡಿದರೆ ಅಥವಾ ಅದರ ಸ್ವಾಯತ್ತತೆಯ ಮೇಲೆ ದುಷ್ಟ ದೃಷ್ಟಿ ಬೀರಿದರೆ, ಪಾಕಿಸ್ತಾನ ಅದಕ್ಕೆ ಬಲವಾಗಿ ಪ್ರತಿಕ್ರಿಯಿಸುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಂದು ವಿಡಿಯೋದಲ್ಲಿ, ಉಸ್ಮಾನಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ನಡುವೆ ಔಪಚಾರಿಕ ಮಿಲಿಟರಿ ಮೈತ್ರಿಗೆ ಕರೆ ನೀಡುವ ಮೂಲಕ ಪಾಕಿಸ್ತಾನದ ಜೊತೆ ಕೈಜೋಡಿಸಲು ಬಾಂಗ್ಲಾದೇಶವನ್ನು ಆಹ್ವಾನಿಸಿದ್ದಾರೆ. ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶಕ್ಕೆ ಕಾಟ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಭಾರತವು ಅಖಂಡ ಭಾರತ ಸಿದ್ಧಾಂತದ ಅಡಿಯಲ್ಲಿ ಬಾಂಗ್ಲಾದೇಶವನ್ನು ಕೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

‘ನಮ್ಮ ಪ್ರಸ್ತಾಪವೆಂದರೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮಿಲಿಟರಿ ಮೈತ್ರಿಯನ್ನು ರಚಿಸಬೇಕು. ಪಾಕಿಸ್ತಾನ ಬಾಂಗ್ಲಾದೇಶದಲ್ಲಿ ಮಿಲಿಟರಿ ನೆಲೆಯನ್ನು ಸ್ಥಾಪಿಸಬೇಕು ಮತ್ತು ಬಾಂಗ್ಲಾದೇಶ ಪಾಕಿಸ್ತಾನದಲ್ಲಿ ಮಿಲಿಟರಿ ನೆಲೆಯನ್ನು ಸ್ಥಾಪಿಸಬೇಕು. ಪಾಕಿಸ್ತಾನ-ಬಾಂಗ್ಲಾದೇಶ ಮಿಲಿಟರಿ ಪಾಲುದಾರಿಕೆಯು ಪ್ರಾದೇಶಿಕ ಶಕ್ತಿಯ ಚಲನಶೀಲತೆಯನ್ನು ಬದಲಾಯಿಸುತ್ತದೆ ಮತ್ತು ಜಾಗತಿಕವಾಗಿ ಎರಡೂ ದೇಶಗಳು ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಬಾಂಗ್ಲಾದೇಶ ಪಾಕಿಸ್ತಾನದ ಈ ಆಫರ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣುತ್ತೆ..

TAGGED:Pakistan says it will fight for Bangladesh
Share This Article
Facebook Twitter Copy Link Print
Previous Article ಸರ್ಕಾರಿ ನೌಕರರಿಗೆ ನ್ಯೂ ಇಯರ್ ಗಿಫ್ಟ್ ಕೊಟ್ಟ ಕೇಂದ್ರ ಸರ್ಕಾರ
Next Article ಲವರ್ ಬಿಟ್ಟು ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ 

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?