Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಗ್ಯಾಸ್ ಬಲೂನ್ ಸ್ಪೋಟದಿಂದ ಮೂವರು ಸ್ಥಳದಲ್ಲಿಯೇ ಛಿದ್ರವಾಗಿ ಸಾವಿಗೀಡಾಗಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ರಾತ್ರಿ ನಡೆದಿದೆ.
ಸೈಕಲ್ನಲ್ಲಿ ಗ್ಯಾಸ್ ಬಲೂನ್ ಮಾರುತ್ತಿದ್ದ ಯುವಕ ಸ್ಭೆರಿದಂತೆ ಮೂವರ ದೇಹಗಳು ಸಿಲಿಂಡರ್ ಸ್ಪೋಟದ ತೀವ್ರತೆಗೆ ಛಿದ್ರ, ಚಿದ್ರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಬೆಂಗಳೂರಿನ ಲಕ್ಷಿö್ಮ, ನಂಜನಗೂಡಿನ ಮಂಜುಳಾ ಹಾಗೂ ಮೂವರು ಪ್ರವಾಸಿಗರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಅಂಗಳದಲ್ಲಿ ಮಾಗಿ ಉತ್ಸವ, ಫಲಪುಷ್ಪ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಅಲ್ಲದೇ ಇವತ್ತು ಕ್ರಿಸ್ಮಸ್ ರಜೆ ಇದ್ದ ಕಾರಣ, ಸಾವಿರಾರು ಮಂದಿ ಅರಮನೆಗೆ ಬಂದು ನೋಡುತ್ತಿದ್ದರು. ಈ ವೇಳೆ ಜಯಮಾರ್ತಾಂಡ ದ್ವಾರದ ಬಳಿ ಯುವಕನೊಬ್ಬ ಗ್ಯಾಸ್ ಬಲೂನ್ ಮಾರಾಟ ಮಾಡುತ್ತಿದ್ದ.
ಬಲೂನ್ಗೆ ನೈಟ್ರೋಜನ್ ಗ್ಯಾಸ್ ತುಂಬುವ ವೇಳೆ ಸಿಲಿಂಡರ್ ಸಿಡಿದು ಭೀಕರವಾಗಿ ಸ್ಪೋಟಿಸಿದೆ. ಇದರಿಂದಾಗಿ ಸ್ಥಳದಲ್ಲಿದ್ದ ಬಲೂನ್ ಮಾರುತ್ತಿದ್ದ ಯುವಕ ಸ್ಭೆರಿದಂತೆ ಮೂವರ ದೇಹಗಳು ಛಿದ್ರ, ಛಿದ್ರಗೊಂಡಿವೆ.
ತೀವ್ರವಾಗಿ ಗಾಯಗೊಂಡ ಐವರನ್ನು ಕೂಡಲೇ ಪೊಲೀಸರು ಕೆ.ಆರ್. ಆಸ್ಪತ್ರೆಗೆ ತುರ್ತು ಚಿಕಿತ್ಸಾ ವಾಹನದಲ್ಲಿ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಘಟನೆ ಬಳಿಕ ಜನರು ದಿಕ್ಕಾಪಾಲಾಗಿ ಓಡಿ ಹೋದರು. ಎಲ್ಲರಲ್ಲೂ ಭಯಾತಂಕವುಟಾಗಿತ್ತು. ಬಾಂಬ್ ಸ್ಪೋಟ ಎಂದೇ ಭಾವಿಸಿದ್ದರು. ಆದರೆ ಗ್ಯಾಸ್ ಬಲೂನ್ ಸಿಲಿಂಡರ್ ಸ್ಪೋಟ ಎಂಬ ಮಾಹಿತಿ ಹೊರ ಬರುತ್ತಿದ್ದಂತೆ ದೊಡ್ಡ ದುರಂತ ತಪ್ಪಿದಂತಾಯಿತು. ಆದರೂ ಈ ಘಟನೆ ಕ್ರಿಸ್ಮಸ್ ಸಂಭ್ರಮದಲ್ಲಿದ್ದವರನ್ನು ಬೆಚ್ಚಿ ಬೀಳುವಂತೆ ಮಾಡಿತು.
ಸ್ಥಳಕ್ಕೆ ಭೇಟಿ ನೀಡಿದ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ವಿವಿಧ ತಂಡಗಳ ಪೊಲೀಸರು ಪರಿಶೀಲನೆ ನಡೆಸಿದರು.
ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ, ಘಟನೆ ಕುರಿತು ಮಾಹಿತಿ ಪಡೆದರು. ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸ್ರಚಿಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.