Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ.
ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಲು ಯತ್ನಿಸಿದ್ದರೂ, ಭೇಟಿ ಸಾಧ್ಯವಾಗದೆ ವಾಪಸ್ ಬಂದಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ತಮ್ಮ ಪಕ್ಷ ನಿಷ್ಠೆ ವಿಚಾರವನ್ನು ಮುಂಚೂಣಿಗೆ ತರುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆಯೇ ಮಾತನಾಡಿದ ಡಿಕೆ ಶಿವಕುಮಾರ್, ‘ನಾನು ಈ ಪಕ್ಷವನ್ನು ಕಟ್ಟಿದ್ದೇನೆ, ಬಾವುಟ ಕಟ್ಟಿದ್ದೇನೆ, ಕಸವೂ ಗುಡಿಸಿದ್ದೇನೆ. ಕೇವಲ ಬಂದು ಭಾಷಣ ಮಾಡಿ ಹೋಗಿಲ್ಲ ’ ಎಂದು ಹೇಳುವ ಮೂಲಕ ತಮ್ಮ ಹೋರಾಟದ ಹಿನ್ನೆಲೆಯನ್ನು ನೆನಪಿಸಿದ್ದಾರೆ. ಒಂದು ದಿನ ಹಿಂದಷ್ಟೇ, ತಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದಿದ್ದ ಡಿಕೆ, ಮರುದಿನವೇ ಪಕ್ಷ ಕಟ್ಟಿದ ಮಾತುಗಳನ್ನಾಡಿದ್ದಾರೆ.
ಪಕ್ಷಕ್ಕೆ ನಾನು ಎಲ್ಲವನ್ನೂ ಕೊಟ್ಟಿದ್ದೇನೆ ಎಂಬ ಡಿಕೆ ಮಾತುಗಳು ಕಾಂಗ್ರೆಸ್ ಒಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದಂತಿವೆ.
https://www.newsics.com/2025/12/26/indian-army-personnel-banned-from-using-social-media/