Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೊಪ್ಪಳ: ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿ ಗಮನ ಸೆಳೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಬಹದ್ದೂರ್ ಬಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ತಾಲೂಕಿನ ಬಹದ್ದೂರ್ ಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು 5, 6, 7, 8ನೇ ತರಗತಿಯ 220 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರು.
ಈ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿ ತರಗತಿಯ 6 ವಿದ್ಯಾರ್ಥಿಗಳನ್ನು ಜಿಂದಾಲ್ನಿಂದ ಬೆಂಗಳೂರಿಗೆ ವಿಮಾನ ಪ್ರವಾಸ ಮಾಡಿಸುವ ಯೋಜನೆಯನ್ನು ಹಾಕಿಕೊಂಡಿದ್ದರು.
ಅದರಂತೆ 24 ವಿದ್ಯಾರ್ಥಿಗಳ ಜತೆಗೆ ಶಾಲೆ ಸಹ ಶಿಕ್ಷಕರು ಹಾಗೂ ಬಿಸಿಯೂಟ ಸಿಬ್ಬಂದಿ, ಎಸ್ಡಿಎಂಸಿ ಪದಾಧಿಕಾರಿಗಳು ಸೇರಿ ಒಟ್ಟು 40 ಮಂದಿ ಶುಕ್ರವಾರ ಕೊಪ್ಪಳದಿಂದ ಬಳ್ಳಾರಿ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ತೆರಳಿದರು. ವಿದ್ಯಾರ್ಥಿಗಳ 2 ದಿನದ ಪ್ರಯಾಣದ ವೆಚ್ಚ 5ಲಕ್ಷ ರೂ. ಅನ್ನು ಬೀರಪ್ಪ ಅಂಡಗಿ ಅವರೇ ಭರಿಸಿದ್ದಾರೆ. ವಿಧಾನಸೌಧ, ತಾರಾಲಯ ಮುಖ್ಯಮಂತ್ರಿಗಳ ಕೊಠಡಿ ಸೇರಿ ವಿಮಾನದಲ್ಲಿ ಪ್ರಯಾಣಿಸುವಂತಹ ಸೌಭಾಗ್ಯ ಕಲ್ಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ನರ್ಸ್ ಬಟ್ಟೆ ಬದಲಿಸುತ್ತಿದ್ದಾಗ ವಿಡಿಯೋ: ಖಾಸಗಿ ಆಸ್ಪತ್ರೆ ಟೆಕ್ನಿಷಿಯನ್ ಬಂಧನ