Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪಾರಿವಾಳ ಅಂದ್ರೆ ಯಾರಿಗ್ ತಾನೆ ಇಷ್ಟವಿಲ್ಲ ಹೇಳಿ.. ಮುಂಜಾನೆಯ ಸಮಯ. ಕೆಲ ಜಾಗಗಳಲ್ಲಿ ಪಾರಿವಾಳಗಳಿಗೆ ಕಾಳು ಹಾಕೋ ಜನ.. ಬೆಳ್ಳಂಬೆಳಗ್ಗೆ ಈ ದೃಶ್ಯಗಳನ್ನು ಕಣ್ತುಂಬಿಕೊಳ್ಳೋದೇ ಸೊಬಗು.. ಆದ್ರೆ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ.
ಮುಂಬೈನ ಉದ್ಯಮಿಯೊಬ್ಬರಿಗೆ ಪಾರಿವಾಳಗಳಿಗೆ ಆಹಾರ ನೀಡುವ ಅಭ್ಯಾಸವಿತ್ತು. ಪೊಲೀಸ್ ತನಿಖೆಯ ಸಮಯದಲ್ಲಿ, ನಿತಿನ್ ಶೇಠ್ ತಮ್ಮ ತಪ್ಪನ್ನು ಒಪ್ಪಿಕೊಂಡರು. ಪೊಲೀಸರ ಪ್ರಕಾರ, ನಿಷೇಧದ ಹೊರತಾಗಿಯೂ ದಾದರ್ನ ಉದ್ಯಮಿ ನಿತಿನ್ ಶೇತ್ ಸಾರ್ವಜನಿಕ ಸ್ಥಳದಲ್ಲಿ ಪಾರಿವಾಳಗಳಿಗೆ ಆಹಾರ ನೀಡುತ್ತಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ದಾದರ್ನ ಉದ್ಯಮಿ ನಿತಿನ್ ಶೇತ್ ಅವರನ್ನು ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ದಂಡ ವಿಧಿಸಿದೆ. ಪಾರಿವಾಳಗಳಿಗೆ ಆಹಾರ ನೀಡಿದ್ದಕ್ಕೆ ಶಿಕ್ಷೆ ಆಗಿರೋದು ಇದೇ ಮೊದಲ ಪ್ರಕರಣ ಎಂದು ಹೇಳಲಾಗಿದೆ.
ನ್ಯಾಯಾಲಯವು ನಿತಿನ್ ಶೇಠ್ ಅವರಿಗೆ ₹5,000 ದಂಡ ವಿಧಿಸಿದೆ. ಬಾಂಬೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಬಿ.ವೈ. ಮಿಸಾಲ್, ಕಳೆದ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 223 (ಬಿ) ಅಡಿಯಲ್ಲಿ ಮಾನವ ಜೀವ, ಆರೋಗ್ಯ ಅಥವಾ ಸುರಕ್ಷತೆಗೆ ಅಪಾಯ ಉಂಟುಮಾಡುವ ಕೃತ್ಯ ಎಸಗಿದ್ದಾನೆ ಎಂದು ತೀರ್ಪು ಹೇಳಿದೆ. ಐಪಿಸಿ ಸೆಕ್ಷನ್ 271 ರ ಅಡಿಯಲ್ಲಿ ಜೀವ, ಆರೋಗ್ಯ ಅಥವಾ ಸುರಕ್ಷತೆಗೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಾಧ್ಯತೆಯ ನಿರ್ಲಕ್ಷ್ಯದ ಕೃತ್ಯದ ಆರೋಪ ಹೊರಿಸಲಾಗಿತ್ತು.
BMC ಈಗಾಗಲೇ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಬಾಂಬೆ ಹೈಕೋರ್ಟ್ ಕೂಡ ಕಳೆದ ಆಗಸ್ಟ್ನಲ್ಲಿ ಇದರ ಬಗ್ಗೆ ವಿಚಾರಣೆ ನಡೆಸಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸುವ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಬೆಂಗಳೂರಲ್ಲೂ ಸರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ.
https://www.newsics.com/2025/12/27/family-court-has-no-authority-to-issue-lookout-notice-high-court/