Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದಲ್ಲೇ ಇದು ಮೊದಲ ಪ್ರಕರಣ: ಪಾರಿವಾಳಗಳಿಗೆ ಆಹಾರ ನೀಡಿದ್ದಕ್ಕೆ ಉದ್ಯಮಿಗೆ 5 ಸಾವಿರ ರೂಪಾಯಿ ದಂಡ ವಿಧಿಸಿದ ಕೋರ್ಟ್
ದೇಶಕರ್ನಾಟಕಪ್ರಮುಖ

ದೇಶದಲ್ಲೇ ಇದು ಮೊದಲ ಪ್ರಕರಣ: ಪಾರಿವಾಳಗಳಿಗೆ ಆಹಾರ ನೀಡಿದ್ದಕ್ಕೆ ಉದ್ಯಮಿಗೆ 5 ಸಾವಿರ ರೂಪಾಯಿ ದಂಡ ವಿಧಿಸಿದ ಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾರಿವಾಳ ಅಂದ್ರೆ ಯಾರಿಗ್ ತಾನೆ ಇಷ್ಟವಿಲ್ಲ ಹೇಳಿ.. ಮುಂಜಾನೆಯ ಸಮಯ. ಕೆಲ ಜಾಗಗಳಲ್ಲಿ ಪಾರಿವಾಳಗಳಿಗೆ ಕಾಳು ಹಾಕೋ ಜನ.. ಬೆಳ್ಳಂಬೆಳಗ್ಗೆ ಈ ದೃಶ್ಯಗಳನ್ನು ಕಣ್ತುಂಬಿಕೊಳ್ಳೋದೇ ಸೊಬಗು.. ಆದ್ರೆ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ.

ಮುಂಬೈನ ಉದ್ಯಮಿಯೊಬ್ಬರಿಗೆ ಪಾರಿವಾಳಗಳಿಗೆ ಆಹಾರ ನೀಡುವ ಅಭ್ಯಾಸವಿತ್ತು. ಪೊಲೀಸ್ ತನಿಖೆಯ ಸಮಯದಲ್ಲಿ, ನಿತಿನ್ ಶೇಠ್ ತಮ್ಮ ತಪ್ಪನ್ನು ಒಪ್ಪಿಕೊಂಡರು. ಪೊಲೀಸರ ಪ್ರಕಾರ, ನಿಷೇಧದ ಹೊರತಾಗಿಯೂ ದಾದರ್‌ನ ಉದ್ಯಮಿ ನಿತಿನ್ ಶೇತ್ ಸಾರ್ವಜನಿಕ ಸ್ಥಳದಲ್ಲಿ ಪಾರಿವಾಳಗಳಿಗೆ ಆಹಾರ ನೀಡುತ್ತಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ದಾದರ್‌ನ ಉದ್ಯಮಿ ನಿತಿನ್ ಶೇತ್ ಅವರನ್ನು ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ದಂಡ ವಿಧಿಸಿದೆ. ಪಾರಿವಾಳಗಳಿಗೆ ಆಹಾರ ನೀಡಿದ್ದಕ್ಕೆ ಶಿಕ್ಷೆ ಆಗಿರೋದು ಇದೇ ಮೊದಲ ಪ್ರಕರಣ ಎಂದು ಹೇಳಲಾಗಿದೆ.

ನ್ಯಾಯಾಲಯವು ನಿತಿನ್ ಶೇಠ್ ಅವರಿಗೆ ₹5,000 ದಂಡ ವಿಧಿಸಿದೆ. ಬಾಂಬೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಬಿ.ವೈ. ಮಿಸಾಲ್, ಕಳೆದ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 223 (ಬಿ) ಅಡಿಯಲ್ಲಿ ಮಾನವ ಜೀವ, ಆರೋಗ್ಯ ಅಥವಾ ಸುರಕ್ಷತೆಗೆ ಅಪಾಯ ಉಂಟುಮಾಡುವ ಕೃತ್ಯ ಎಸಗಿದ್ದಾನೆ ಎಂದು ತೀರ್ಪು ಹೇಳಿದೆ. ಐಪಿಸಿ ಸೆಕ್ಷನ್ 271 ರ ಅಡಿಯಲ್ಲಿ ಜೀವ, ಆರೋಗ್ಯ ಅಥವಾ ಸುರಕ್ಷತೆಗೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಾಧ್ಯತೆಯ ನಿರ್ಲಕ್ಷ್ಯದ ಕೃತ್ಯದ ಆರೋಪ ಹೊರಿಸಲಾಗಿತ್ತು.

BMC ಈಗಾಗಲೇ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಬಾಂಬೆ ಹೈಕೋರ್ಟ್ ಕೂಡ ಕಳೆದ ಆಗಸ್ಟ್‌ನಲ್ಲಿ ಇದರ ಬಗ್ಗೆ ವಿಚಾರಣೆ ನಡೆಸಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧಿಸುವ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಬೆಂಗಳೂರಲ್ಲೂ ಸರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಷೇಧಿಸಲಾಗಿದೆ.

https://www.newsics.com/2025/12/27/family-court-has-no-authority-to-issue-lookout-notice-high-court/

TAGGED:000 for feeding pigeonsCourt fines businessman Rs 5
Share This Article
Facebook Twitter Copy Link Print
Previous Article ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ : ಹೈಕೋರ್ಟ್
Next Article ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೈ ನಡಗುವ ಚಳಿ : ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?