Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಎಸೆದು ಹೋಗಿರುವ ಘಟನೆ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲಿ ನಡೆದಿದೆ.
ಹೆಣ್ಣು ಮಗು ಎಂಬ ಕಾರಣಕ್ಕೆ ದೇವಾಲಯದ ಪಕ್ಕದಲ್ಲಿ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಅಲ್ಲಿನ ಜನ ಹೇಳಿದ್ದಾರೆ. ಈ ಮಗು ಜನಿಸಿ ಒಂದು ದಿನ ಆಗಿರಬಹುದು ಎಂದು ಹೇಳಲಾಗಿದೆ. ಮಗು ಅಳುತ್ತಿರುವುದು ಕೇಳಿ ದೇವಸ್ಥಾನದ ಹೋಮ್ ಗಾರ್ಡ್ಗಳು ಸ್ಥಳಕ್ಕೆ ಬಂದು ನೋಡಿದ್ದಾರೆ. ತಕ್ಷಣ ಮಗುವನ್ನು ಎತ್ತಿಕೊಂಡು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ. ಅಮ್ಮನ ಎದೆಹಾಲು ಇಲ್ಲದೆ ಹಸಿವಿನಿಂದ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ. ಇನ್ನು ಈ ಮಗುವಿನ ಪೋಷಕರು ಯಾರು ಎಂಬ ಕಾರ್ಯಚರಣೆ ನಡೆಯುತ್ತಿದೆ. ಮದುವೆಗೂ ಮುನ್ನವೇ ಗರ್ಭಿಣಿಯಾಗಿ, ಮಗುವನ್ನು ಪಡೆದಿರುವ ಕಾರಣಕ್ಕೆ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ದೇವಸ್ಥಾನದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ಎಸೆದು ಹೋಗಿರುವ ಕಾರಣ, ಮಗುವಿನ ಮೇಲೆ ಹುಳುಗಳು ಮೆತ್ತಿಕೊಂಡು ನೋವಿನಿಂದ ಮಗು ಕೂಗುತ್ತಿತ್ತು. ಇದನ್ನು ಗಮನಿಸಿದ ಹುಲಗೆಮ್ಮ ದೇವಸ್ಥಾನದಲ್ಲಿ ಕೆಲಸ ಮಾಡತಿದ್ದ,ಹೋಮ್ ಗಾರ್ಡ್ ಗಳು ಮಗುವಿನ ರಕ್ಷಣೆ ಮಾಡಿ, ಹುಲಿಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇದೀಗ ಮಗು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿದೆ. ಮಗುವ ಆರೋಗ್ಯವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.