Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು ಈವರೆಗೂ ಬಸ್ ದರ, ಮೆಟ್ರೋ ದರ ಹಾಲಿನ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ಕರೆಂಟ್ ಶಾಕ್ನ ಭೀತಿ ಶುರುವಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ವಿದ್ಯುತ್ ದರ ಏರಿಕೆಗೆ ಮುಂದಾಗಿದೆ.
ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಇಂಧನ ಇಲಾಖೆ ಮುಂದಾಗಿದ್ದರ ಪರಿಣಾಮವೇ ಈ ದರ ಏರಿಕೆಯಾಗಿದೆ. ಅಂದರೆ, ಗ್ರಾಹಕರ ಮಾಸಿಕ ಬಿಲ್ನಲ್ಲಿ ಉಲ್ಲೇಖ ಮಾಡಿ ಹೆಚ್ಚುವರಿ ದರ ವಸೂಲಿ ಮಾಡಲಾಗುತ್ತದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.
ವಿದ್ಯುತ್ ದರ ಹೆಚ್ಚಳ ಸಂಬಂಧ ‘ಟಿವಿ9’ ಜತೆ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ.
https://www.newsics.com/2025/12/30/tiger-attacks-man-then-sleeps-on-couch/