newsics.com
ಸ್ಯಾಂಡಲ್ವುಡ್ ನಟ ದರ್ಶನ್ ಎರಡನೇ ಆರೋಪಿ ಆಗಿರೋ ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ನಿರಂತರವಾಗಿ ನಡೀತಾ ಇದೆ. ಮಂಗಳವಾರ ಸೆಷೆನ್ಸ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ.
ಹತ್ಯೆಯಾದ ರೇಣುಕಾಸ್ವಾಮಿ ತಾಯಿ ರತ್ನಪ್ರಭಾರನ್ನ ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರತ್ನಪ್ರಭಾ ಅವರು ಜಡ್ಜ್ ಎದುರು ಹೇಳಿಕೆ ನೀಡಿದ್ರು. ಈ ವೇಳೆ ಅವರನ್ನ ಆರೋಪಿ ಪರ ವಕೀಲರಾದ ಬಾಲನ್, ಸಿ.ವಿ.ನಾಗೇಶ್ ಅವರು ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ರು.
ಗೊಂದಲದ ಹೇಳಿಕೆ ನೀಡಿದ ರೇಣುಕಾಸ್ವಾಮಿ ತಾಯಿ
ಹೌದು ರೇಣುಕಾಸ್ವಾಮಿ ಸಿಮ್, ಮೊಬೈಲ್ ಹಾಗೂ ಕಾಲ್ ಗಳ ಬಗ್ಗೆ ಅವರ ತಾಯಿ ರತ್ನಪ್ರಭಾ ದ್ವಂದ್ವ ಹೇಳಿಕೆ ನೀಡಿದ್ದಾರೆ. ತನ್ನ ಮಗನ ಮೊಬೈಲ್ ನಂಬರ್ ಗೊತ್ತಿಲ್ಲ ಅಂತ ರತ್ನಪ್ರಭಾ ಹೇಳಿದ್ದಾರೆ. ಪೊಲೀಸ್ ತನಿಖೆ ವೇಳೆ ಮೊಬೈಲ್ ನಲ್ಲಿ ಸೇವ್ ಆಗಿದೆ ಅಂತ ಹೇಳಿಕೆ ನೀಡಿದ್ರು. ಮೊಬೈಲ್ ನಲ್ಲಿನ ನಂಬರ್ ನೋಡಿ ಇದೇ ನಂಬರ್ ಅಂತ ಕನ್ಫರ್ಮ್ ಮಾಡಿ ಪೊಲೀಸರಿಗೆ ಹೇಳಿದ್ದರು. ಆದರೇ, ಬೆಂಗಳೂರಿನ ಕೋರ್ಟ್ ನಲ್ಲಿ ಕ್ರಾಸ್ ಎಕ್ಸಾಮಿನೇಷನ್ ಮಾಡುವಾಗ ನನಗೆ ಮೊಬೈಲ್ ನಂಬರ್ ಗೊತ್ತಿಲ್ಲ ಅನ್ನುವ ಉತ್ತರ ನೀಡಿದ್ದಾರೆ. ಇನ್ನೂ ಹಲವು ಹೇಳಿಕೆಗಳನ್ನ ಗೊಂದಲಕರವಾಗಿ ನೀಡಿದ್ದಾರೆ.
ಹೋಸ್ಟೈಲ್ ವಿಟ್ನೆಸ್ಎಂದರೆ, ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳುವ ವ್ಯಕ್ತಿ, ತನನ್ನು ಕರೆದ ಪಕ್ಷದ ಪರವಾಗಿ ನಿಲ್ಲದೆ, ಅವರ ಮಾತಿಗೆ ವಿರುದ್ಧವಾಗಿ ಹೇಳಿಕೆ ನೀಡುವ ಸಾಕ್ಷಿ. ಸರಳವಾಗಿ ಹೇಳೋದಾದರೆ, ಒಬ್ಬ ಸಾಕ್ಷಿಧಾರನನ್ನ ಒಂದು ಪಾರ್ಟಿ ನ್ಯಾಯಾಲಯಕ್ಕೆ ಕರೆಸುತ್ತೆ. ಆದರೆ ಆ ಸಾಕ್ಷಿಧಾರ ನ್ಯಾಯಾಲಯದಲ್ಲಿ ತನ್ನ ಹಿಂದಿನ ಹೇಳಿಕೆಯನ್ನ ಬದಲಿಸಿ, ಅಥವಾ ಸತ್ಯವನ್ನ ಮುಚ್ಚಿಹಾಕಿ, ಅಥವಾ ಪ್ರತಿವಾದಿಗಳಿಗೆ ಅನುಕೂಲವಾಗುವಂತೆ ಮಾತನಾಡಿದರೆ, ಆ ಸಾಕ್ಷಿಯನ್ನ Hostile Witness ಅಂತ ಕರೆಯಲಾಗುತ್ತದೆ.
ಸದ್ಯ ರೇಣುಕಾಸ್ವಾಮಿ ತಾಯಿ ಪೊಲೀಸರ ಮುಂದೆ ಹೇಳಿದ್ದೇ ಒಂದು, ಕೋರ್ಟ್ನಲ್ಲಿ ಹೇಳಿದ್ದೇ ಒಂದು. ಸೋ ಇದು ದರ್ಶನ್ ಪರ ವಕೀಲರಿಗೆ ದಾಳವಾಗಿ ಪರಿಣಮಿಸಲಿದೆ. ಪ್ರಾಸಿಕ್ಯೂಶನ್ ಇನ್ನೊಮ್ಮೆ ರೇಣುಕಾ ತಾಯಿ ವಿಚಾರಣೆಗೆ ಮನವಿ ಮಾಡಿದ್ರೆ ದರ್ಶನ್ ಪರ ವಕೀಲರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.