Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಗೇಟ್ ಬಂದ್ ಮಾಡಿ ಭಾವುಕರಾಗಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರಾದ ವೀರಪ್ಪ ಅವರನ್ನು ಶಾಲೆಯಿಂದ ಹೊರಗೆ ಹೋಗದಂತೆ ಕಣ್ಣೀರು ಹಾಕಿದ್ದಾರೆ..
ನಾವು ಹೋಗಲ್ಲ, ಸರ್ ಬರಬೇಕು,” ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಷಕರೊಬ್ಬರು ಮಾತನಾಡಿದ್ದಾರೆ. ವೀರಪ್ಪ ಸರ್ ಅವರು ನಮ್ಮ ಮಕ್ಕಳನ್ನು ಅವರ ಮನೆಯ ಮಕ್ಕಳಿಗಿಂತ ಹೆಚ್ಚಾಗಿ ನೋಡ್ಕೊಂಡಿದ್ದಾರೆ. ನಮ್ಮ ಮಕ್ಕಳು ಅವರ ಪ್ರೀತಿಗೆ ಸೋತಿದ್ದಾರೆ. ಜತೆಗೆ ನಮ್ಮ ಮಕ್ಕಳು ಉದ್ದಾರ ಆಗಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಮಕ್ಕಳ ಕಣ್ಣೀರು ನೋಡಿ ಶಿಕ್ಷಕರು ನಾಳೆ ಶಾಲೆಗೆ ಬರುವುದಾಗಿ ಭರವಸೆ ನೀಡಿದ್ದಾರೆ. ನಾಳೆ ನೀವು ಶಾಲೆಗೆ ಬರದಿದ್ದರೆ ನಾವು ಕೂಡ ನಾಳೆ ಶಾಲೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ .
ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ