Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿರುವುದು ತರಿಕೆರೆ ತಾಲೂಕಿನ ನಂದಿಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಗ್ರಾಮದ ತಿಮ್ಮಪ್ಪನನ್ನು 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದಳು. 2 ಮಕ್ಕಳಾದ ಬಳಿಕ ತವರಿಗೆ ಹೋಗಿ ಹಣ ತರುವಂತೆ ತಿಮ್ಮಪ್ಪ ತನ್ನ ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ.
ತಾರಾ ಅವರ ಹೇಳಿಕೆಯ ಪ್ರಕಾರ, ಈ ಘಟನೆಯು ಸಂಜೆ ನಡೆದಿದೆ. ಅವರು ತಮ್ಮ ಕೆಲಸ ಮುಗಿಸಿ ಊಟಕ್ಕೆ ಕುಳಿತಿದ್ದಾಗ, ಪತಿ ತಿಮ್ಮಪ್ಪ ನನಗೆ ಊಟ ಹಾಕಲ್ಲ, ನೀನು ಮಾತ್ರ ಊಟ ಮಾಡುತ್ತೀಯಾ ಎಂದು ಹೇಳಿದ್ದಾನೆ.
ನಂತರ ಆಕೆಯನ್ನು ವಿವಸ್ತ್ರಗೊಳಿಸಿ, ದೊಣ್ಣೆಯಿಂದ ಹೊಡೆದಿದ್ದಾನೆ. ತಾರಾ ಹಿಂಬಾಗಿಲಿನಿಂದ ಓಡಿಹೋಗಿ ಟವಲ್ ಸುತ್ತಿಕೊಂಡು ನೆರೆಮನೆಯವರ ಸಹಾಯದಿಂದ ಆಸ್ಪತ್ರೆಗೆ ಹೋಗಿದ್ದಾರೆ. ಲಿಂಗದಹಳ್ಳಿ ಪೊಲೀಸರ ಸಹಕಾರದಿಂದ ತಾವು ಜೀವಂತ ಉಳಿದಿರುವುದಾಗಿ ತಾರಾ ತಿಳಿಸಿದ್ದು, ತಮಗೆ ನ್ಯಾಯ ಸಿಗಬೇಕು ಎಂದು ಬೇಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಕುಟುಂಬ ಸದಸ್ಯರಿಂದ ಬೆದರಿಕೆ ಕರೆಗಳೂ ಬರುತ್ತಿವೆ ಎಂದು ಅವರು ಹೇಳಿದ್ದಾರೆ.