Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ಬಂಡೆಗೆ ಅಳವಡಿಸಲಾಗಿದ್ದ ಸ್ಫೋಟಕ ಸ್ಫೋಟಿಸಿ 4 ಚಿರತೆಗಳು ಅದರ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಸಮೀಪ ನಡೆದಿದೆ.
ಮೂಲಗಳ ಪ್ರಕಾರ ಡಿಸೆಂಬರ್ 27, 2025 ರಂದು ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕಗ್ಗಲೀಪುರ ಶ್ರೇಣಿಯ ಅರಣ್ಯ ಅಧಿಕಾರಿಗಳು ಸರ್ವೆ ಸಂಖ್ಯೆ 51 ರಲ್ಲಿ 3-4 ವರ್ಷ ವಯಸ್ಸಿನ ಹೆಣ್ಣು ಚಿರತೆಯ ಮೃತದೇಹವನ್ನು ಪತ್ತೆ ಮಾಡಿದರು. ನಂತರ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ತನ್ನ ಗರ್ಭದಲ್ಲಿ ಮೂರು ಮರಿಗಳನ್ನು ಹೊಂದಿತ್ತು ಎಂದು ತಿಳಿದುಬಂದಿದೆ.
ಇನ್ನು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಜನವರಿ 1, 2026 ರಂದು ಹೊರಡಿಸಲಾದ ಅಧಿಕೃತ ಹೇಳಿಕೆಯಲ್ಲಿ, ಗಣಿಗಾರಿಕೆ ಚಟುವಟಿಕೆಗಳು ಸಂರಕ್ಷಿತ ಅರಣ್ಯ ವಲಯಗಳನ್ನು ಅತಿಕ್ರಮಿಸುತ್ತಿವೆಯೇ ಎಂಬುದರ ಕುರಿತು ಸಮಗ್ರ ತನಿಖೆಗೆ ಸಚಿವರು ಆದೇಶಿಸಿದ್ದಾರೆ.
ವನ್ಯಜೀವಿಯ ಸಾವಿಗೆ ಕಾರಣರಾದವರ ವಿರುದ್ಧ ಸಂಪೂರ್ಣ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಸಚಿವ ಖಂಡ್ರೆ ಹೇಳಿದರು.