Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಂಗಳೂರು ಹೊರತಾಗಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಅಪಘಾತ ಮತ್ತು ಸಾರಿಗೆ ನಿಯಮ ಉಲ್ಲಂಘನೆ ಹೆಚ್ಚಾಗಿರುವ ರಸ್ತೆಗಳಲ್ಲಿ ರಸ್ತೆ ಸುರಕ್ಷತೆಗೆ ಕೃತಕ ಬುದ್ಧಿಮತ್ತೆ(ಎಐ) ಸ್ಮಾರ್ಟ್ ಎನ್ ಫೋರ್ಸ್ ಮೆಂಟ್ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುರುತಿಸಿದ ರಾಜ್ಯದ 60 ರಸ್ತೆಗಳಲ್ಲಿ ಅಪಘಾತ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಧಾರವಾಡ, ದಾವಣಗೆರೆ, ಬೆಳಗಾವಿ, ಕಲಬುರಗಿ, ವಿಜಯನಗರ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೇರಿದ ರಸ್ತೆಗಳಲ್ಲಿ ಎಐ ಆಧಾರಿತ ಸ್ಮಾರ್ಟ್ ಕ್ಯಾಮೆರಾ ಅಳವಡಿಸಲಾಗುವುದು .
ಈ ಕ್ಯಾಮೆರಾಗಳು ವಾಹನಗಳು ನಿಯಮ ಉಲ್ಲಂಘಿಸಿದಲ್ಲಿ ಅದರ ವಿಡಿಯೋ ಮತ್ತು ಫೋಟೋ ಸೆರೆ ಹಿಡಿದು ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸುತ್ತವೆ. ಅದರ ಆಧಾರದಲ್ಲಿ ವಾಹನಗಳ ವಿರುದ್ಧ ಸ್ವಯಂ ಚಾಲಿತ ಡಿಜಿಟಲ್ ಚಲನ್ ಸಿದ್ದಪಡಿಸಿ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ರವಾನಿಸಲಾಗುತ್ತದೆ.
https://www.newsics.com/2026/01/06/north-korea-comes-to-venezuelas-aid-through-missile-test/