Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹೂವಿನ ಬಾಣದಂತೆ ಅಂತ ಹಾಡನ್ನು ಹಾಡಿ ವೈರಲ್ ಆಗಿದ್ದ ಯುವತಿ, ಜೀ ಕನ್ನಡದ ಪ್ರತಿಷ್ಠಿತ ಕಾಮಿಡಿ ಶೋನಲ್ಲಿ ನಿತ್ಯಾಶ್ರೀ ಅತಿಥಿಯಾಗಿ ಭಾಗವಹಿಸಿದ್ದರು.
ಯೋಗರಾಜ್ ಭಟ್, ಜಗ್ಗೇಶ್, ತಾರಾ ಅವರಂತಹ ದಿಗ್ಗಜರ ಎದುರು ನಟಿಸಿ ಸೈ ಎನಿಸಿಕೊಂಡಿದ್ದರು. ಆದರೆ, ಕಾಮಿಡಿ ಕಿಲಾಡಿಗಳು ಶೋನಲ್ಲಿ ಅತಿಥಿಯಾಗಿ ಪರ್ಫಾಮ್ ಮಾಡಿ ಬರುತ್ತಿದ್ದಂತೆ ನಿತ್ಯಾಶ್ರೀಗೆ ಸೋಶಿಯಲ್ ಮೀಡಿಯಾಗಳಲ್ಲಿ ಕಾಲೆಳೆಯುವುದಕ್ಕೆ ಶುರು ಮಾಡಿದ್ದರು. ನೆಗೆಟಿವ್ ಕಾಮೆಂಟ್ಗಳನ್ನು ಹಾಕುತ್ತಿದ್ದರು.
ಅಂತಹವರಿಗೆ ನಿತ್ಯಾಶ್ರೀ ತಿರುಗೇಟು ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ನಿತ್ಯಾಶ್ರೀ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ನಿತ್ಯಾಶ್ರೀಯವರ ಪ್ರತಿಭೆಯನ್ನು ಪ್ರಶ್ನೆ ಮಾಡಿದ್ದಾರೆ. ಇಂತಹವರಿಗೆ ಭಾವನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಂತಹದ್ದೇನು ಹೇಳಿದ್ದಾರೆ ಅಂತ ನೋಡುವುದಾರೇ,
ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಕಾಲೆಳೆದವರಿಗೆ ನಿತ್ಯಾಶ್ರೀ ಪ್ರಬುದ್ಧವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ವಿರುದ್ಧ ವಿಡಿಯೋ ಮಾಡಿ ವಿರೋಧಿಸುವುದಕ್ಕೂ ಮುನ್ನ ಒಮ್ಮೆ ಯೋಚನೆ ಮಾಡಿ ಎಂದು ಹೇಳುತ್ತಾ? ಕೆಟ್ಟದಾಗಿ ಕಾಮೆಂಟ್ಗಳನ್ನು ಪಾಸ್ ಮಾಡಿದವರಿಗೆ ಕೂಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
“ಈ ವಿಡಿಯೋ ಮಾಡುವುದಕ್ಕೆ ಕಾರಣ, ಮೊನ್ನೆ ನಡೆದ ಕಾಮಿಡಿ ಕಿಲಾಡಿಗಳು ಶೋನಲ್ಲಿ ನಾನು ಅತಿಥಿಯಾಗಿ ನಟಿಸಿದ್ದೇನೆ. ಅದನ್ನು ತುಂಬಾ ಜನ ಕೆಟ್ಟದಾಗಿ ಟ್ರೋಲ್ ಮಾಡಿದ್ದಾರೆ. ಅವರೆಲ್ಲರಿಗೂ ನಾನು ಕೇಳುವುದು ಇಷ್ಟೇ. ಇದೇ ಚಾನ್ಸ್ ನಿಮ್ಮ ಅಕ್ಕನಿಗೋ, ತಂಗಿಗೋ ಸಿಕ್ಕಿದ್ರೆ ಇದನ್ನು ಬಳಸಿಕೊಳ್ಳುತ್ತಿದ್ರಾ? ಬಿಡ್ತಿದ್ರಾ? ಹಾಗೇ ಇಷ್ಟು ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ರಾ?” ಎಂದು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿರುವವರಿಗೆ ಪ್ರತಿಕ್ರಿಯಿಸಿದ್ದಾರೆ.
ಇನ್ಮುಂದೆ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಕಡ್ಡಾಯ ರಜೆ