Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಂಡ್ಯ ಶಾಸಕ ರವಿಕುಮಾರ್ ಅವರು ಮಂಡ್ಯ ನಗರದ ಸಂಜಯ ಸರ್ಕಲ್ ಸೇರಿದಂತೆ ಎಲ್ಲಾ ವೃತ್ತಗಳನ್ನು ಆಧುನೀಕತೆಯೊಂದಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ತಿಳಿಸಿದ್ದಾರೆ.ಒಕ್ಕಲಿಗರ ಪ್ರಾಬಲ್ಯ ಜಿಲ್ಲೆ ಮಂಡ್ಯದಲ್ಲಿ ನಾಡ ಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಾಣ ಮಾಡುವ ಆಶಯವನ್ನ ಹೊಂದಲಾಗಿತ್ತು. ಇದೀಗ ನಾಡಪ್ರಭು ಕೆಂಪೇಗೌಡರ ಸುಮಾರು 26 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ಸಂಜಯ ಸರ್ಕಲ್ ನಲ್ಲಿ ನಿರ್ಮಾಣಕ್ಕೆ ಚಾಲನೆ ದೊರೆತಿದೆ.
ಸುಮಾರು 26 ಅಡಿ ಎತ್ತರದ ಈ ಪ್ರತಿಮೆ ನಿರ್ಮಾಣಕ್ಕೆ ನಿರ್ಧಾರವಾಗಿದ್ದು, 2 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ. ಒಕ್ಕಲಿಗ ಸಮುದಾಯದ ಬಹುಕಾಲದ ಬೇಡಿಕೆಗೆ ಸ್ಪಂದಿಸಿದ ಗಣಿಗ ರವಿಕುಮಾರ್, ಪ್ರತಿಮೆ ನಿರ್ಮಾಣಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.
ಇನ್ನು ಪ್ರತಿಮೆ ಕೆತ್ತನೆಯ ಮಹತ್ವದ ಜವಾಬ್ದಾರಿಯನ್ನು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆ ಗಣಿಗ ರವಿಕುಮಾರ್ ಅವರು ಶಿಲ್ಪಿ ಅರುಣ್ ಯೋಗಿರಾಜ್ ಜೊತೆಗೂಡಿ, ಸಂಜಯ್ ವೃತ್ತದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
https://www.newsics.com/2026/01/11/there-is-no-break-in-the-silver-gold-race/