Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಸ್ಪೋಟಕ ತಿರುವು ದೊರೆತಿದೆ.
ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್ನಲ್ಲಿ ವಾಸವಿದ್ದರು. ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳಾಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.
ಈ ಸಂಬಂಧ ಶರ್ಮಿಳಾ ಪ್ರಿಯಕರ ಕೇರಳ ಮೂಲದ ಕರ್ನಲ್ ಕುರೈ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ರಾಮಮೂರ್ತಿ ನಗರದ ಅಪಾರ್ಟ್ಮೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿದ್ದು, ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮಂಗಳೂರು ಮೂಲದ 34 ವರ್ಷದ ಸಾಫ್ಟ್ವೇರ್ ಉದ್ಯೋಗಿ ಶರ್ಮಿಳಾ ಮೃತಪಟ್ಟಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ ಕೊನೆಗೂ ಬಯಲಾಗಿದೆ. ತನಿಖೆ ವೇಳೆ ಟೆಕ್ಕಿ ಶರ್ಮಿಳಾ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಟೆಕ್ಕಿ ಶರ್ಮಿಳಾಳನ್ನ ಓನ್ ಸೈಡ್ ಲವ್ ಮಾಡ್ತಿದ್ದ, ಎದುರು ಮನೆಯ ಕೇರಳ ಮೂಲದ ಯುವಕ ಕರ್ನಲ್ ಕುರೈ ಕೊಲೆಗಾರ ಎಂದು ಬಯಲಾಗಿದೆ. ಈತನಿಗೆ ಇನ್ನೂ 18 ವರ್ಷವಾಗಿದ್ದು, ಈತ ಕಾಲೇಜು ಓದುತ್ತಿದ್ದ. ಆದ್ರೆ, ತನ್ನ ವಯಸ್ಸಿಗಿಂತ ದೊಡ್ಡವಳಾಗಿದ್ದ 34 ವರ್ಷದ ಟೆಕ್ಕಿ ಶರ್ಮಿಳಾ ಮೇಲೆ ಲವ್ ಆಗಿದೆ. ಆದ್ರೆ, ಈ ವಿಚಾರವನ್ನು ಶರ್ಮಿಳಾಗೆ ಹೇಳಿರಲಿಲ್ಲ. ತಾನೇ ಮನಸ್ಸಲ್ಲಿ ಇಟ್ಟುಕೊಂಡು ಕೊನೆಗೆ ಆಕೆಯನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.
ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್ನಲ್ಲಿ ವಾಸವಿದ್ದರು. ಇನ್ನು ಆರೋಪಿ ಕರ್ನಲ್ ಕುರೖ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿದ್ದು, ಪ್ರತಿದಿನ ಇಬ್ಬರೂ ಮಾತನಾಡುತ್ತಿದ್ದು, ಇದರ ನಡುವೆ ಕುರೈಗೆ ಶರ್ಮಿಳನ ಮೇಲೆ ಲವ್ ಆಗಿದೆ. ಆದ್ರೆ, ಈ ಲವ್ ವಿಚಾರವನ್ನು ಶರ್ಮಿಳಾಗೆ ಹೇಳಿರಲಿಲ್ಲ. ಹೀಗೆ ಒಂದು ದಿನ ಅಂದರೆ ಜನವರಿ 3ರಂದು ಕರ್ನಲ್ ಕುರೈ, ಬಾಲ್ಕನಿ ಮೂಲಕ ಶರ್ಮಿಳಾಳ ಮನೆಯೊಳಗೆ ನುಗ್ಗಿದ್ದು, ಸಡನ್ ಆಗಿ ಹಿಂಬದಿಯಿಂದ ಶರ್ಮಿಳಾಳನ್ನು ಅಪ್ಪಿಕೊಂಡಿದ್ದ. ಆಗ ಶರ್ಮಿಳಾ ಕರ್ನಲ್ ಕುರೈನಿಂದ ಬಿಡಿಸಿಕೊಳ್ಳಲು ಯತ್ನಿಸಿದ್ದಾಳೆ. ಆ ವೇಳೆ ಕುರೈ, ಶರ್ಮಿಳಾಳ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದಿದ್ದು, ಇದರಿಂದ ಶರ್ಮಿಳಾ, ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಳಿಕ ಶರ್ಮಿಳಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಅಲ್ಲದೇ ಸಾಕ್ಷಿ ನಾಶ ಮಾಡಲು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು. ಇದನ್ನೇ ಗಮನಿಸಿ ಕರ್ನಲ್ ಮನೆಯೊಳಗೆ ನುಗ್ಗಿ ಈ ರೀತಿ ಕೃತ್ಯ ಎಸಗಿದ್ದಾನೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್, ಇಂಟರ್ನೆಟ್ ಬಳಸಲ್ವಂತೆ: ಯಾಕೆ?