Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಹಿಳಾ ಅಧಿಕಾರಿ ದೂರು ಕೊಟ್ಟ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕ್ಷಮೆ ಕೇಳಿದ್ದಾರೆ.
ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರುವು ಮಾಡಿದ್ದಕ್ಕೆ ನಗರಸಭೆಯ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ರಾಜೇಗೌಡ ಅವಾಚ್ಯವಾಗಿ ಶಬ್ದ ಬಳಸಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮೃತ ಗೌಡ ಇದೀಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ನಾನು ಯಾವುದೇ ದುರುದ್ದೇಶದಿಂದ ಹೇಳಿಕೆ ನೀಡಿಲ್ಲ. ಅಕಸ್ಮಾತ್ ನನ್ನ ಮಾತಿನಿಂದ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಅವರ ಮನಸ್ಸಿಗೆ ಬೇಜಾರಾಗಿದ್ದರೆ ಮಹಿಳಾ ಅಧಿಕಾರಿಗೆ ನಾನು ಕ್ಷಮೆ ಕೇಳುತ್ತೇನೆ. ಯಾವುದೇ ರೀತಿಯಾದ ಜೀವ ಬೆದರಿಕೆ ನಾನು ಹಾಕಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
ಇನ್ನು ರಾಜೀವ್ ಗೌಡ ಕ್ಷಮೆ ಕೇಳಿದ ವಿಚಾರ ತಿಳಿದು ಮಹಿಳಾ ಅಧಿಕಾರಿ ಅಮೃತ ಗೌಡ ನನಗೆ ಯಾವುದೇ ಕ್ಷಮೆ ಬೇಡ. ನಾನು ಪೊಲೀಸ್ ಠಾಣೆಗೆ ಅವರ ವಿರುದ್ಧ ದೂರು ನೀಡಿದ್ದೇನೆ. ದೂರಿನಲ್ಲಿ ರಾಜೀವ್ ಗೌಡನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.