Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
‘ಬಿಗ್ ಬಾಸ್ ಕನ್ನಡ ಸೀಸನ್ 12′ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ.
ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು ಈ ಫೋಟೋದಲ್ಲಿ ಕಾಣಿಸಿದೆ. ಅಶ್ವಿನಿ ಗೌಡ ಅವರ ಪರವಾಗಿ ಮಾತಾಡಲು ನಾರಾಯಣ ಗೌಡ ಹೋಗಿದ್ದರು ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಅವರು ಸ್ಪಷನೆ ನೀಡಿದ್ದಾರೆ.
ಅಂದಹಾಗೆ, ಈ ಭೇಟಿಗೂ ಬಿಗ್ ಬಾಸ್ ಕಾರ್ಯಕ್ರಮಕ್ಕೂ ಸಂಬಂಧ ಇಲ್ಲ. ನಾರಾಯಣ ಗೌಡ ಅವರು ತಮ್ಮ ಮಗನ ಮದುವೆಗೆ ಆಹ್ವಾನ ನೀಡಲು ಸುದೀಪ್ ಮನೆಗೆ ಹೋಗಿದ್ದಾಗ ತೆಗೆದ ಫೋಟೋ ಇದು. ಈ ಫೋಟೋವನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆ ಬಗ್ಗೆ ಕರವೇ ಧರ್ಮಣ್ಣ ಮಾತನಾಡಿದ್ದಾರೆ.
ಬೇರೆಯವರ ರೀತಿಯೇ ಸುದೀಪ್ ಅವರಿಗೆ ಮದುವೆ ಪತ್ರಿಕೆ ನೀಡಿದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಅದನ್ನು ಕೆಲವು ಟ್ರೋಲ್ ಪೇಜ್ಗಳು ತೆಗೆದುಕೊಂಡು ಈ ರೀತಿ ಮಾಡುತ್ತಿದ್ದಾರೆ. ನಾರಾಯಣ ಗೌಡ್ರು ಹಾಗೂ ಸುದೀಪ್ ಅವರ ವಿರೋಧಿಗಳು ಈ ರೀತಿ ಹೊಟ್ಟೆ ತುಂಬಿಸಿಕೊಳ್ಳುತ್ತಿರುವುದಕ್ಕೆ ನಾಚಿಕೆ ಆಗಬೇಕು’ ಎಂದು ಧರ್ಮಣ್ಣ ಹೇಳಿದ್ದಾರೆ.
ಕುತೂಹಲ ಕೆರಳಿಸಿದ ಅಣ್ಣ-ತಮ್ಮನ ಪೋಸ್ಟ್; ಡಿಕೆಶಿ ಬೆನ್ನಲ್ಲೇ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ವೈರಲ್