Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಈ ಭೂಮಿಯ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಕಾಲ ಎಂದು ಕರೆಯಲಾಗುತ್ತದೆ. ಮಾನವ ಚೈತನ್ಯ ಮತ್ತು ಜೀವನದ ಸಂತೋಷದ ಸಂಕೇತವಾದ ಈ ಹಬ್ಬವನ್ನು ಕುಟುಂಬ ಮತ್ತು ಸ್ನೇಹಿತರು ಒಟ್ಟಾಗಿ ಸಂಭ್ರಮಿಸುತ್ತಾರೆ. ಈ ಹಬ್ಬದ ಸಮಯದಲ್ಲಿ, ಜನರು ಗಂಗಾ, ಯಮುನಾ, ಗೋದಾವರಿ, ಕೃಷ್ಣ ಮುಂತಾದ ಪವಿತ್ರ ನದಿಗಳಲ್ಲಿ ಸ್ನಾನ ಮಾಡುತ್ತಾರೆ.
ವಿಶೇಷವೆಂದರೆ ಈ ಸಂಕ್ರಾಂತಿ ಸಂಭ್ರಮದ ದಿನ ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ. ಆದ್ರೆ ಎಷ್ಟೋ ಜನಕ್ಕೆ ಸಂಕ್ರಾಂತಿ ಹಬ್ಬದಂದು ಗಾಳಿಪಟ ಯಾಕೆ ಹಾರಿಸುತ್ತಾರೆ ಅನ್ನೋದರ ಬಗ್ಗೆ ಗೊತ್ತಿರುವುದಿಲ್ಲ. ಸಂಕ್ರಾಂತಿಯಂದು ಗಾಳಿಪಟ ಯಾಕೆ ಹಾರಿಸುತ್ತಾರೆ? ಏನಿದರ ವಿಶೇಷತೆ ಎನ್ನುವ ಕೌತುಕದ ಬಗ್ಗೆ ತಿಳಿಯಬೇಕಿದ್ದರೆ ಮುಂದೆ ಓದಿ…
ಎಳ್ಳು ಬೆಲ್ಲವನ್ನು ಸವಿದು ಎಲ್ಲರೂ ಭಕ್ತಿ ಭಾವದಿಂದ ಹಬ್ಬವನ್ನು ಆಚರಿಸುತ್ತಾರೆ. ಇದರೊಂದಿಗೆ ಮಕರ ಸಂಕ್ರಾಂತಿ ಹಬ್ಬದ ಇನ್ನೊಂದು ಸಂಪ್ರದಾಯ ಎಂದರೆ ಅದು ಗಾಳಿಪಟ ಹಾರಿಸುವುದು.
ಧಾರ್ಮಿಕ ನಂಬಿಕೆಗಳ ಪ್ರಕಾರ, ಭಗವಾನ್ ಶ್ರೀರಾಮ ಮಕರ ಸಂಕ್ರಾಂತಿಯ ದಿನದಂದು ಗಾಳಿಪಟ ಹಾರಿಸುತ್ತಿದ್ದ ಹಿನ್ನೆಲೆ ಸಿಗುತ್ತದೆ. ತ್ರೇತಾಯುಗದಲ್ಲಿ ಮಕರ ಸಂಕ್ರಾಂತಿಯ ದಿನದಂದು ಭಗವಾನ್ ರಾಮ ತನ್ನ ಸಹೋದರರು ಮತ್ತು ಹನುಮಂತನೊಂದಿಗೆ ಗಾಳಿಪಟವನ್ನು ಹಾರಿಸುತ್ತಿದ್ದುದ್ದಾಗಿ ನಂಬಿಕೆ. ಹೀಗಾಗಿ, ಅಂದಿನಿಂದ ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವ ಸಂಪ್ರದಾಯ ಪ್ರಾರಂಭವಾಯಿತು ಎಂಬ ನಂಬಿಕೆ ನಮ್ಮಲ್ಲಿದೆ. ಇದೇ ಕಾರಣಕ್ಕೆ ಈಗಲೂ ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಹಾರಿಸಲಾಗುತ್ತದೆ. ಈ ದಿನ ಸ್ನಾನ, ಪೂಜೆ ಮತ್ತು ದಾನಕ್ಕೂ ಬಹಳ ಮಹತ್ವವಿದೆ.
ಸಂಕ್ರಾಂತಿಯ ದಿನ ಪಟ ಹಾರಿಸುವುದರ ಹಿಂದೆ ಅದ್ಭುತ ವೈಜ್ಞಾನಿಕ ಕಾರಣವೂ ಅಡಗಿದೆ. ಚಳಿಗಾಲದ ಕೊನೆಯಲ್ಲಿ ದೇಹದಲ್ಲಿ ಸಾಕಷ್ಟು ಬ್ಯಾಕ್ಟೀರಿಯಾಗಳು ಇರುತ್ತವೆ ಮತ್ತು ರೋಗನಿರೋಧಕ ಶಕ್ತಿ ಕಡಿಮೆಯಾಗಿರುತ್ತದೆ.
ನೈಸರ್ಗಿಕ ಚಿಕಿತ್ಸೆ: ಗಾಳಿಪಟ ಹಾರಿಸುವ ನೆಪದಲ್ಲಿ ನಾವು ಗಂಟೆಗಟ್ಟಲೆ ಬಿಸಿಲಿನಲ್ಲಿ ಕಾಲ ಕಳೆಯುತ್ತೇವೆ.
ಆರೋಗ್ಯ ಲಾಭ: ಮುಂಜಾನೆಯ ಸೂರ್ಯನ ಕಿರಣಗಳು ನೇರವಾಗಿ ದೇಹದ ಮೇಲೆ ಬಿದ್ದಾಗ ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ ಮತ್ತು ದೇಹಕ್ಕೆ ಹೇರಳವಾಗಿ ವಿಟಮಿನ್ ಡಿ ದೊರೆಯುತ್ತದೆ. ಇದು ಚರ್ಮದ ಸಮಸ್ಯೆಗಳನ್ನು ನಿವಾರಿಸಿ ಮೂಳೆಗಳನ್ನು ಬಲಪಡಿಸುತ್ತದೆ.
ಹಬ್ಬದ ವಿಶೇಷತೆಗಳು:
ಖಗೋಳ ವಿದ್ಯಮಾನ: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿ ಶಿವಲಿಂಗಕ್ಕೆ ಸ್ಪರ್ಶವಾಗುವ ಅಪರೂಪದ ವಿದ್ಯಮಾನಕ್ಕೆ ಈ ದಿನ ಸಾಕ್ಷಿಯಾಗಬಹುದು.
ಮಕರ ಜ್ಯೋತಿ: ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದು ಭಕ್ತರು ಪುನೀತರಾಗುತ್ತಾರೆ.
https://www.newsics.com/2026/01/14/three-of-a-family-killed-in-collision-between-car-and-ksrtc-bus/