Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಟಾಪ್ 6 ಸ್ಪರ್ಧಿಗಳ ಆಯ್ಕೆ ಆಗಬೇಕಿದೆ. ಈ ಪ್ರಕ್ರಿಯೆಯ ಭಾಗವಾಗಿ ಮಿಡ್ ವೀಕ್ ಎಲಿಮಿನೇಶನ್ ಆಗಿದೆ. ಧ್ರುವಂತ್ ಮನೆಯಿಂದ ಹೊರಬಂದಿದ್ದಾರೆ.
ಧನುಷ್ ಗೌಡ ಈಗಾಗಲೇ ಟಾಪ್ 6 ಸ್ಥಾನಕ್ಕೆ ಅವಕಾಶ ಪಡೆದಿದ್ದರು. ಅಶ್ವಿನಿ ಗೌಡ, ಧ್ರುವಂತ್, ಗಿಲ್ಲಿ ನಟ, ರಘು, ರಕ್ಷಿತಾ ಶೆಟ್ಟಿ, ಕಾವ್ಯ ಶೈವ ಅವರ ಮಧ್ಯೆ ಯಾರು ಔಟ್ ಆಗುತ್ತಾರೆ ಎಂಬ ಪ್ರಶ್ನೆ ಇತ್ತು.
ಧ್ರುವಂತ್ ಅವರು ಇಡೀ ಸೀಸನ್ನಲ್ಲಿ ಮನರಂಜನೆ ನೀಡಿದ ಸ್ಪರ್ಧಿ ಎಂದು ಹೇಳಿ ಕಿಚ್ಚ ಸುದೀಪ್ ಅವರು ಇಡೀ ಸೀಸನ್ಗೆ ಕಿಚ್ಚನ ಚಪ್ಪಾಳೆ ನೀಡಿದ್ದರು. ಈ ಬಗ್ಗೆ ವ್ಯಾಪಕ ವಿರೋಧ ಬಂದಿತ್ತು
ಧ್ರುವಂತ್ ಅವರು ದೊಡ್ಮನೆಯೊಳಗಡೆ ಅಭಿಮಾನಿಗಳ ಜತೆ ಮಾತನಾಡಿದ್ದು ಕೂಡ ಟ್ರೋಲ್ ಆಗಿತ್ತು. “ಒನ್ ಮ್ಯಾನ್ ಆರ್ಮಿಯಾಗಿ ಆಡಿದ್ದೇನೆ, ನೀವೆಲ್ಲ ನನ್ನ ಮೇಲೆ ನಂಬಿಕೆ ಇಟ್ಟು ಇಲ್ಲಿಗೆ ಕಳಿಸಿದ್ದೀರಿ, ನಾನು ಆಟ ಆಡಿ, ಎಲ್ಲರನ್ನೂ ಹೊರಗಡೆ ಕಳಿಸಿದ್ದೇನೆ” ಎಂದು ಹೇಳಿದ್ದರು.
ಧ್ರುವಂತ್ ಅವರು ಅತಿಯಾಗಿ, ಆತ್ಮವಿಶ್ವಾಸದಿಂದ ಮಾತನಾಡಿದ್ದಾರೆ ಎಂದು ಅನೇಕರು ಹೇಳಿದ್ದರು. ಕಿಚ್ಚನ ಚಪ್ಪಾಳೆ ಪಡೆದವರು ಯಾಕೆ ದೊಡ್ಮನೆಯಲ್ಲಿ ಇಲ್ಲ ಎಂಬ ಪ್ರಶ್ನೆ ಕೂಡ ಕೇಳಿಬಂದಿದೆ.
ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?