Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾಗಿದ್ದು, ಇದೀಗ ಆ ನಿಧಿಗೆ ಸಂಬಂಧಪಟ್ಟಂತೆ ಹಲವಾರು ಬೆಳವಣಿಗೆಗಳು ನಡೆದಿವೆ
ಇದೀಗ ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ ಆಗಲಿದೆ.
ಗದಗ ಜಿಲ್ಲೆಯ ಲಕ್ಕುಂಡಿ ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಕಲ್ಯಾಣ ಚಾಲುಕ್ಯರ, ರಾಷ್ಟ್ರಕೂಟರ, ಹೊಯ್ಸಳರು, ಕಳಚೂರಿಗಳು, ವಿಜಯನಗರ ಅರಸರು, ದಾನಚಿಂತಾಮಣಿ ಅತ್ತಿಮಬ್ಬೆ ಆಳಿದ ನಾಡು. ಈ ನಾಡು ಕೇವಲ ಶಿಲ್ಪಕಲೆಗೆ ಅಷ್ಟೇ ಹೆಸರಾಗಿಲ್ಲ.
ಸಾಕಷ್ಟು ಚಿನ್ನ, ಬೆಳ್ಳಿ, ವಜ್ರ, ವೈಢೂರ್ಯಗಳ ಸಂಪತ್ತನ್ನು ತನ್ನೊಡಲೊಳಗೆ ಲೆಕ್ಕವಿಲ್ಲದಷ್ಟು ಹುದುಗಿಟ್ಟುಕೊಂಡಿದೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದ ಬೆನ್ನಲ್ಲೇ ಈಗ ಮತ್ತೊಮ್ಮೆ ಉತ್ಖನನಕ್ಕೆ ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಉತ್ಪನನ ನಡೆಯಲಿದೆ.
https://www.newsics.com/2026/01/16/sabarimala-temple-gold-theft-case-chief-priest-arrested/