Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಅತ್ಯಾಚಾರ ಪ್ರಕರಣಗಳಿಗೆ ಮಹಿಳೆಯರ ಸೌಂದರ್ಯವೇ ಕಾರಣ” ಎಂದು ನಾಲಗೆ ಹರಿಯಬಿಡುವ ಮೂಲಕ ಕಾಂಗ್ರೆಸ್ ಶಾಸಕ ವಿವಾದ ಹುಟ್ಟು ಹಾಕಿದ್ದಾರೆ.
ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬರೈಯ ಈ ರೀತಿಯ ಹೇಳಿಕೆ ನೀಡಿದ ʼಮಹಾನುಭಾವʼ. ಸದ್ಯ ಅವರ ಈ ಹೇಳಿಕೆ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ದೇಶಾದ್ಯಂತ ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ʼʼಒಬ್ಬ ಪುರುಷನು ರಸ್ತೆಯಲ್ಲಿ ಹೋಗುವಾಗ ಸುಂದರವಾದ ಹುಡುಗಿಯನ್ನು ನೋಡಿದರೆ ಅವನ ಮನಸ್ಸು ಚಂಚಲಗೊಂಡು ದಾರಿ ತಪ್ಪುತ್ತದೆ ಮತ್ತು ಇದು ಅತ್ಯಾಚಾರಕ್ಕೆ ಪ್ರೇರೇಪಣೆ ನೀಡುತ್ತದೆʼʼ ಎಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.
ವ್ಯಕ್ತಿಗಳಿಗಿಂತ ಹೆಚ್ಚಾಗಿ ಗುಂಪುಗಳಿಂದಲೇ ಅತ್ಯಾಚಾರ ನಡೆಯುತ್ತದೆ ಎಂದು ಬರೈಯ ಹೇಳಿದ್ದಾರೆ. ಶಿಶುಗಳ ಮೇಲೂ ನಡೆಯುವ ಇಂತಹ ಅಪರಾಧವನ್ನು ಅವರು ಖಂಡಿಸಿದ್ದಾರೆ. “ಭಾರತದಲ್ಲಿ ಅತ್ಯಾಚಾರಕ್ಕೆ ಹೆಚ್ಚು ಬಲಿಯಾಗುವವರು ಯಾರು? ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಕ್ಕೆ ಸೇರಿದವರು. ಅತ್ಯಾಚಾರದ ಸಿದ್ಧಾಂತವೆಂದರೆ ಒಬ್ಬ ಪುರುಷ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸುಂದರ ಹುಡುಗಿಯನ್ನು ನೋಡಿದರೆ ಅದು ಅವನ ಮನಸ್ಸನ್ನು ಬೇರೆಡೆಗೆ ತಿರುಗಬಹುದು ಮತ್ತು ಅತ್ಯಾಚಾರ ಎಸಗುವಂತೆ ಮಾಡಬಹುದು” ಎಂದು ಅವರು ಹೇಳಿದ್ದಾರೆ.
ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ
ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಮಹಿಳೆಯರು ಸುಂದರವಾಗಿಲ್ಲದಿದ್ದರೂ ಪುರಾತನ ಧರ್ಮಗ್ರಂಥಗಳಲ್ಲಿ ಬರೆದಿರುವುದರಿಂದ ಅವರ ಮೇಲೆ ಅತ್ಯಾಚಾರವಾಗುತ್ತದೆ ಎಂದು ಬರೈಯ ತಿಳಿಸಿದ್ದಾರೆ.
ʼರುದ್ರಯಾಮಲ ತಂತ್ರʼ ಎಂಬ ಪುರಾತನ ಗ್ರಂಥವನ್ನು ಉಲ್ಲೇಖಿಸಿದ ಅವರು, ʼʼಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯದ ಮಹಿಳೆಯರೊಂದಿಗೆ ದೈಹಿಕ ಸಂಬಂಧ ಹೊಂದುವುದು ಪುಣ್ಯಕ್ಷೇತ್ರ ಸಂದರ್ಶಿಸಿದಷ್ಟೇ ಪುಣ್ಯ ಲಭಿಸುತ್ತದೆ ಎಂದು ಕೆಲವರು ನಂಬಿರುವುದು ಅಪರಾಧಗಳ ಸಂಖ್ಯೆ ಹೆಚ್ಚಾಗಲು ಕಾರಣʼʼ ಎಂದಿದ್ದಾರೆ. “ತೀರ್ಥಯಾತ್ರೆಗೆ ಹೋಗಲು ಸಾಧ್ಯವಾಗದಿದ್ದರೆ ಪರ್ಯಾಯವೇನು? ನಂಬಿಕೆಯ ಪ್ರಕಾರ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಹೊಂದುವುದು. ಇದಕ್ಕಾಗಿ ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಾರೆ. ಒಬ್ಬ ಪುರುಷನು ಮಹಿಳೆಯ ಒಪ್ಪಿಗೆಯಿಲ್ಲದೆ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾಲ್ಕು ತಿಂಗಳ ಮತ್ತು ಒಂದು ವರ್ಷದ ಹೆಣ್ಣುಮಕ್ಕಳ ಮೇಲೆಯೂ ಅತ್ಯಾಚಾರ ನಡೆಯುತ್ತದೆʼʼ ಎಂದೆಲ್ಲ ನಾಲಗೆ ಹರಿಯಬಿಟ್ಟಿದ್ದಾರೆ.
ಶಾಸಕರ ಈ ವಿವಾದಾತ್ಮಕ ಹೇಳಿಕೆಯು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು, ಅತ್ಯಾಚಾರವನ್ನು ಯಾವುದೇ ರೂಪದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಇದು ಶಾಸಕರ ವೈಯಕ್ತಿಕ ಹೇಳಿಕೆಯಾಗಿದೆಯೇ ಹೊರತು ಪಕ್ಷದ ನಿಲುವಲ್ಲ ಎಂದು ಸ್ಪಷ್ಟಪಡಿಸಿ ಅಂತರ ಕಾಯ್ದುಕೊಂಡಿದ್ದಾರೆ.