Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ
ದೇಶಪ್ರಮುಖವೈರಲ್

ಅತ್ಯಾಚಾರಕ್ಕೆ ಸುಂದರ ಹುಡುಗಿಯರೇ ಕಾರಣ ಎಂದ ಕಾಂಗ್ರೆಸ್‌ ಶಾಸಕ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅತ್ಯಾಚಾರ ಪ್ರಕರಣಗಳಿಗೆ ಮಹಿಳೆಯರ ಸೌಂದರ್ಯವೇ ಕಾರಣ” ಎಂದು ನಾಲಗೆ ಹರಿಯಬಿಡುವ ಮೂಲಕ ಕಾಂಗ್ರೆಸ್‌ ಶಾಸಕ ವಿವಾದ ಹುಟ್ಟು ಹಾಕಿದ್ದಾರೆ.

ಮಧ್ಯ ಪ್ರದೇಶದ ಕಾಂಗ್ರೆಸ್‌ ಶಾಸಕ ಫೂಲ್ ಸಿಂಗ್ ಬರೈಯ ಈ ರೀತಿಯ ಹೇಳಿಕೆ ನೀಡಿದ ʼಮಹಾನುಭಾವʼ. ಸದ್ಯ ಅವರ ಈ ಹೇಳಿಕೆ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ದೇಶಾದ್ಯಂತ ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ʼʼಒಬ್ಬ ಪುರುಷನು ರಸ್ತೆಯಲ್ಲಿ ಹೋಗುವಾಗ ಸುಂದರವಾದ ಹುಡುಗಿಯನ್ನು ನೋಡಿದರೆ ಅವನ ಮನಸ್ಸು ಚಂಚಲಗೊಂಡು ದಾರಿ ತಪ್ಪುತ್ತದೆ ಮತ್ತು ಇದು ಅತ್ಯಾಚಾರಕ್ಕೆ ಪ್ರೇರೇಪಣೆ ನೀಡುತ್ತದೆʼʼ ಎಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ವ್ಯಕ್ತಿಗಳಿಗಿಂತ ಹೆಚ್ಚಾಗಿ ಗುಂಪುಗಳಿಂದಲೇ ಅತ್ಯಾಚಾರ ನಡೆಯುತ್ತದೆ ಎಂದು ಬರೈಯ ಹೇಳಿದ್ದಾರೆ. ಶಿಶುಗಳ ಮೇಲೂ ನಡೆಯುವ ಇಂತಹ ಅಪರಾಧವನ್ನು ಅವರು ಖಂಡಿಸಿದ್ದಾರೆ. “ಭಾರತದಲ್ಲಿ ಅತ್ಯಾಚಾರಕ್ಕೆ ಹೆಚ್ಚು ಬಲಿಯಾಗುವವರು ಯಾರು? ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಕ್ಕೆ ಸೇರಿದವರು. ಅತ್ಯಾಚಾರದ ಸಿದ್ಧಾಂತವೆಂದರೆ ಒಬ್ಬ ಪುರುಷ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸುಂದರ ಹುಡುಗಿಯನ್ನು ನೋಡಿದರೆ ಅದು ಅವನ ಮನಸ್ಸನ್ನು ಬೇರೆಡೆಗೆ ತಿರುಗಬಹುದು ಮತ್ತು ಅತ್ಯಾಚಾರ ಎಸಗುವಂತೆ ಮಾಡಬಹುದು” ಎಂದು ಅವರು ಹೇಳಿದ್ದಾರೆ.

ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಮಹಿಳೆಯರು ಸುಂದರವಾಗಿಲ್ಲದಿದ್ದರೂ ಪುರಾತನ ಧರ್ಮಗ್ರಂಥಗಳಲ್ಲಿ ಬರೆದಿರುವುದರಿಂದ ಅವರ ಮೇಲೆ ಅತ್ಯಾಚಾರವಾಗುತ್ತದೆ ಎಂದು ಬರೈಯ ತಿಳಿಸಿದ್ದಾರೆ.

ʼರುದ್ರಯಾಮಲ ತಂತ್ರʼ ಎಂಬ ಪುರಾತನ ಗ್ರಂಥವನ್ನು ಉಲ್ಲೇಖಿಸಿದ ಅವರು, ʼʼಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯದ ಮಹಿಳೆಯರೊಂದಿಗೆ ದೈಹಿಕ ಸಂಬಂಧ ಹೊಂದುವುದು ಪುಣ್ಯಕ್ಷೇತ್ರ ಸಂದರ್ಶಿಸಿದಷ್ಟೇ ಪುಣ್ಯ ಲಭಿಸುತ್ತದೆ ಎಂದು ಕೆಲವರು ನಂಬಿರುವುದು ಅಪರಾಧಗಳ ಸಂಖ್ಯೆ ಹೆಚ್ಚಾಗಲು ಕಾರಣʼʼ ಎಂದಿದ್ದಾರೆ. “ತೀರ್ಥಯಾತ್ರೆಗೆ ಹೋಗಲು ಸಾಧ್ಯವಾಗದಿದ್ದರೆ ಪರ್ಯಾಯವೇನು? ನಂಬಿಕೆಯ ಪ್ರಕಾರ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಹೊಂದುವುದು. ಇದಕ್ಕಾಗಿ ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಾರೆ. ಒಬ್ಬ ಪುರುಷನು ಮಹಿಳೆಯ ಒಪ್ಪಿಗೆಯಿಲ್ಲದೆ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ನಾಲ್ಕು ತಿಂಗಳ ಮತ್ತು ಒಂದು ವರ್ಷದ ಹೆಣ್ಣುಮಕ್ಕಳ ಮೇಲೆಯೂ ಅತ್ಯಾಚಾರ ನಡೆಯುತ್ತದೆʼʼ ಎಂದೆಲ್ಲ ನಾಲಗೆ ಹರಿಯಬಿಟ್ಟಿದ್ದಾರೆ.

ಶಾಸಕರ ಈ ವಿವಾದಾತ್ಮಕ ಹೇಳಿಕೆಯು ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು, ಅತ್ಯಾಚಾರವನ್ನು ಯಾವುದೇ ರೂಪದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಇದು ಶಾಸಕರ ವೈಯಕ್ತಿಕ ಹೇಳಿಕೆಯಾಗಿದೆಯೇ ಹೊರತು ಪಕ್ಷದ ನಿಲುವಲ್ಲ ಎಂದು ಸ್ಪಷ್ಟಪಡಿಸಿ ಅಂತರ ಕಾಯ್ದುಕೊಂಡಿದ್ದಾರೆ.

https://x.com/thenewsdrill/status/2012435146931368121?ref_src=twsrc%5Etfw%7Ctwcamp%5Etweetembed%7Ctwterm%5E2012435146931368121%7Ctwgr%5E546a67cd31161d11932d497fe0d90ccf11d851ae%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Congress MLA Phool Singh Baraiya sparks controversy by blaming beautiful girls for rape
Share This Article
Facebook Twitter Copy Link Print
Previous Article ಮಧ್ಯಾಹ್ನವಾದ್ರೂ ಚಪಾತಿ ಬಿಸಿ ಬಿಸಿಯಾಗಿ, ಸಾಫ್ಟ್ ಆಗಿರಬೇಕಾ? ಜಸ್ಟ್ ಈ ಟಿಪ್ಸ್ ಟ್ರೈ ಮಾಡಿ
Next Article ಮೈಸೂರಿನಲ್ಲಿ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ!

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?