Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!; ಸತ್ಯ ಬಯಲಾಗಿದ್ದು ಹೇಗೆ?
ಕರ್ನಾಟಕಪ್ರಮುಖ

ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!; ಸತ್ಯ ಬಯಲಾಗಿದ್ದು ಹೇಗೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮ್ಯಾಟ್ರಿಮೋನಿ ಸೈಟ್‌ಗಳ ಮೂಲಕ ಪರಿಚಯವಾಗಿ, ಕೋಟಿ ಕೋಟಿ ಆಸ್ತಿಯ ಆಮಿಷವೊಡ್ಡಿ, ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ ಬರೋಬ್ಬರಿ 1.75 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಪ್ರಕರಣದಲ್ಲಿ ಕೇವಲ ಒಬ್ಬ ವ್ಯಕ್ತಿಯಲ್ಲದೆ, ಆತನ ಇಡೀ ಕುಟುಂಬವೇ ಸೇರಿ ವಂಚನೆಗೆ ಸ್ಕೆಚ್ ಹಾಕಿರುವ ಆಘಾತಕಾರಿ ಸತ್ಯ ಬಯಲಾಗಿದೆ.
ವೈಟ್‌ಫೀಲ್ಡ್ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿಗೆ 2024ರ ಮಾರ್ಚ್‌ನಲ್ಲಿ ಮ್ಯಾಟ್ರಿಮೋನಿ ಸೈಟ್ ಮೂಲಕ ವಿಜಯ್ ರಾಜ್ ಗೌಡ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ತಾನು ದೊಡ್ಡ ಉದ್ಯಮಿ, ಸುಮಾರು 715 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇದೆ ಎಂದು ನಂಬಿಸಿದ್ದ ವಿಜಯ್, ಯುವತಿಯ ಮನ ಗೆದ್ದಿದ್ದ. ಅಲ್ಲದೆ ತನ್ನ ತಂದೆ ಬೋರೆಗೌಡ ಅವರನ್ನು ‘ನಿವೃತ್ತ ತಹಶೀಲ್ದಾರ್’ ಎಂದು ಸುಳ್ಳು ಹೇಳಿ ಪರಿಚಯ ಮಾಡಿಕೊಟ್ಟಿದ್ದ.
ಅಲ್ಲದೇ, ವಿಜಯ್ ರಾಜ್ ಗೌಡ ಎಂಬಾತನಿಗೆ ಈಗಾಗಲೇ ಮದುವೆಯಾಗಿ ಒಂದು ಮಗುವೂ ಇತ್ತು. ಆದರೆ ಯುವತಿಯನ್ನು ನಂಬಿಸಲು ತನ್ನ ಸ್ವಂತ ಪತ್ನಿ ಸೌಮ್ಯಳನ್ನೇ ‘ಅಕ್ಕ’ ಎಂದು ಪರಿಚಯಿಸಿದ್ದ! ಕೆಂಗೇರಿ ಬಳಿ ಯುವತಿಯನ್ನು ಕರೆಸಿಕೊಂಡಿದ್ದ ಈ ಕುಟುಂಬ, ತಾವೆಲ್ಲರೂ ಸೇರಿ ಮದುವೆಯ ಮಾತುಕತೆ ನಡೆಸುವ ನಾಟಕವಾಡಿದ್ದರು. ಈ ವೇಳೆ ವಿಜಯ್ ತಂದೆ ಬೋರೆಗೌಡ, “ನಿಮ್ಮ ಹಣಕ್ಕೆ ನಾನೇ ಗ್ಯಾರೆಂಟಿ” ಎಂದು ಅಭಯ ನೀಡಿದ್ದರು.
ಬಹಳ ದಿನ ಕಳೆದರೂ ಹಣ ವಾಪಸ್ ನೀಡದಿದ್ದಾಗ ಯುವತಿ ಒತ್ತಾಯ ಮಾಡಲಾರಂಭಿಸಿದ್ದಳು. ಆಗ ವಿಜಯ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ಇದೆ ಎಂದು ಕಾಲಹರಣ ಮಾಡಿದ್ದ. ಒತ್ತಡ ಹೆಚ್ಚಾದಾಗ ಕೇವಲ 22 ಲಕ್ಷ ರೂ. ವಾಪಸ್ ನೀಡಿ, ಉಳಿದ ಹಣ ಕೇಳಿದರೆ ಜೀವ ಬೆದರಿಕೆ ಹಾಕಲಾರಂಭಿಸಿದ್ದ. ಇದರಿಂದ ಅನುಮಾನಗೊಂಡ ಯುವತಿ ವಿಜಯ್‌ನ ಹಿನ್ನೆಲೆ ತಲಾಷ್ ನಡೆಸಿದ್ದಾಳೆ. ಈ ವೇಳೆ ಆತನಿಗೆ ಈಗಾಗಲೇ ಮದುವೆಯಾಗಿರುವುದು ಮತ್ತು ಆತ ಪರಿಚಯಿಸಿದ ‘ಅಕ್ಕ’ ಎಂಬ ಮಹಿಳೆ ಆತನ ಹೆಂಡತಿ ಎಂಬ ಸತ್ಯ ಗೊತ್ತಾಗಿ ಆಘಾತಕ್ಕೊಳಗಾಗಿದ್ದಾರೆ.
ಮೋಸ ಹೋದ ಯುವತಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆ ನಡೆದ ಸ್ಥಳ ಕೆಂಗೇರಿ ವ್ಯಾಪ್ತಿಯಲ್ಲಿ ಬರುವುದರಿಂದ ಪ್ರಕರಣವನ್ನು ಕೆಂಗೇರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಸದ್ಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಹಂತ ಹಂತವಾಗಿ ನಡೆದ ಲೂಟಿ

  • ಒಮ್ಮೆ ಯುವತಿಯ ನಂಬಿಕೆ ಗಳಿಸಿದ ನಂತರ ವಿಜಯ್ ತನ್ನ ಅಸಲಿ ಆಟ ಶುರು ಮಾಡಿದ್ದ.
  • ಮೊದಲಿಗೆ ತನ್ನ ಆಸ್ತಿ ವಿಚಾರವಾಗಿ ಇಡಿ (ED) ಕೇಸ್ ದಾಖಲಾಗಿದೆ, ಬ್ಯಾಂಕ್ ಅಕೌಂಟ್ ಫ್ರೀಜ್ ಆಗಿದೆ ಎಂದು ನಂಬಿಸಲು ನಕಲಿ ಕೋರ್ಟ್ ದಾಖಲೆಗಳನ್ನು ತೋರಿಸಿದ್ದ.
  • ತುರ್ತು ಅಗತ್ಯವಿದೆ ಎಂದು ಹೇಳಿ ಮೊದಲು 15 ಸಾವಿರ ರೂ. ಪಡೆದಿದ್ದ.
  • ನಂತರ ‘ಒಟ್ಟಿಗೆ ಬ್ಯುಸಿನೆಸ್ ಮಾಡೋಣ’ ಎಂದು ಯುವತಿಯ ಹೆಸರಿನಲ್ಲಿ ವಿವಿಧ ಬ್ಯಾಂಕುಗಳಿಂದ ಲೋನ್ ಮಾಡಿಸಿದ್ದ.
  • ಯುವತಿ ಮಾತ್ರವಲ್ಲದೆ, ಆಕೆಯ ಸ್ನೇಹಿತರು ಮತ್ತು ಸಂಬಂಧಿಕರಿಗೂ ಬ್ಯುಸಿನೆಸ್ ಲಾಭದ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಸಾಲ ಕೊಡಿಸಿದ್ದ. ಹೀಗೆ ಹಂತ ಹಂತವಾಗಿ ಬರೋಬ್ಬರಿ 1.75 ಕೋಟಿ ರೂಪಾಯಿಯನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ.

ಬಿಗ್ ಬಾಸ್ ಕನ್ನಡ ಸೀಸನ್ 12ರ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

TAGGED:A family of thieves who cheated a young techie of ₹1.75 crore!; How did the truth come to light?
Share This Article
Facebook Twitter Copy Link Print
Previous Article ಬಿಗ್ ಬಾಸ್ ಕನ್ನಡ ಸೀಸನ್ 12ರ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?
Next Article ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಬೃಹತ್ ಹಾವು ಪ್ರತ್ಯಕ್ಷ; ಇನ್ನೊಂದಡೆ ಶಿವಲಿಂಗು ಪತ್ತೆ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?