Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಕಾನೂನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಹೊಸ ಕಾನೂನ ಪ್ರಕಾರ, ಮರ್ಯಾದಾ ಹತ್ಯೆ ಆಧಾರಿತ ಅಪರಾಧ ಎಸಗುವವರಿಗೆ 10 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ.ಗಳವರೆಗೆ ದಂಡ ವಿಧಿಸುವ ಪ್ರಸ್ತಾಪ ಮಾಡಲಾಗುತ್ತಿದೆ.
ಮರ್ಯಾದಾ ಹತ್ಯೆಗಳು ಮತ್ತು ಅಂತರ್ಜಾತಿ ವಿವಾಹಗಳಲ್ಲಿ ದಂಪತಿಗಳ ಮೇಲೆ ಘೋರ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ವಿವಾಹ ಸ್ವಾತಂತ್ರ್ಯ ಮತ್ತು ಗೌರವ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ನಿಷೇಧ ಮಸೂದೆ-2026 ಎಂಬ ಹೊಸ ಮಸೂದೆ ತರಲು ಸರ್ಕಾರ ಮುಂದಾಗಿದೆ. ಈ ಮಸೂದೆಯು ಮುಂಬರುವ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.
ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಾನ್ಯ ಎಂಬ ಯುವತಿಯು ಪರಿಶಿಷ್ಟ ಜಾತಿಯ ಹುಡುಗನನ್ನು ಮದುವೆಯಾದ ಕಾರಣ ಆಕೆಯ ತಂದೆ ಮತ್ತು ಸಂಬಂಧಿಕರು ಭೀಕರವಾಗಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆಯು ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಅಲ್ಲದೆ, ಇಂತಹ ಹತ್ಯೆಗಳ ತಡೆಗೆ ವಿಶೇಷ ಕಾನೂನು ಜಾರಿಗೆ ತರುವಂತೆ ವ್ಯಾಪಕ ಆಗ್ರಹ ವ್ಯಕ್ತವಾಗಿತ್ತು.
ಮಸೂದೆಯ ಪ್ರಕಾರ, ಮರ್ಯಾದೆ, ಗೌರವದ ಹೆಸರಿನಲ್ಲಿ ದಂಪತಿಗಳು ಅಥವಾ ಅವರಲ್ಲಿ ಒಬ್ಬರಿಗೆ ಗಂಭೀರ ಹಾನಿಯನ್ನುಂಟು ಮಾಡುವವರಿಗೆ ಕನಿಷ್ಠ 10 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದು ಜೀವಾವಧಿ ಶಿಕ್ಷೆ ಮತ್ತು 3 ಲಕ್ಷ ರೂ.ಗಳವರೆಗೆ ದಂಡದವರೆಗೆ ವಿಸ್ತರಿಸಲ್ಪಡಬಹುದು. ಪ್ರಕರಣದಲ್ಲಿ, ಸಂತ್ರಸ್ತರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದರೆ, ಅಪರಾಧಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ.ಗಳ ದಂಡ ವಿಧಿಸಲಾಗುತ್ತದೆ. ಒಂದು ವೇಳೆ ಸಾವು ಸಂಭವಿಸಿದ್ದರೆ, ಭಾರತೀಯ ಜ್ಞಾನ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಶಿಕ್ಷೆಯ ಜೊತೆಗೆ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.