Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ; ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?
ಕರ್ನಾಟಕಪ್ರಮುಖ

ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ; ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇಂತಹ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಇನ್ಮುಂದೆ ಪದವಿ ಪೂರ್ವ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಇಲಾಖೆ ಚಿಂತನೆ ನಡೆಸುತ್ತಿದೆ.
ಜನವರಿ 27ರಿಂದ ಆರಂಭಗೊಳ್ಳಲಿರುವ ಎರಡನೇ ಪ್ರಿಪರೇಟರಿ ಪರೀಕ್ಷೆಗೆ ಮುನ್ನವೇ ಈ ನಿರ್ಧಾರವನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪರೀಕ್ಷೆಗಳ ಪಾವಿತ್ರ್ಯ ಕಾಪಾಡುವ ಸಲುವಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ ಉಪನ್ಯಾಸಕರಿಗೂ ಕಾಲೇಜು ಆವರಣದಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇರದಂತೆ ನಿರ್ಬಂಧ ಹೇರಲು ಚರ್ಚೆ ನಡೆಯುತ್ತಿದೆ.
ಶಿಕ್ಷಣ ಇಲಾಖೆ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಕಾಲೇಜು ಆವರಣ ಪ್ರವೇಶಿಸುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಬೇಕಾಗುತ್ತದೆ. ಉಪನ್ಯಾಸಕರು ತಮ್ಮ ಮೊಬೈಲ್‌ಗಳನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಬೇಕಾಗಿದ್ದು, ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಮೊಬೈಲ್ ನಿಷೇಧ ಜಾರಿಗೊಳಿಸಲಾಗುವುದು. ಈ ಸಂಬಂಧ ಈಗಾಗಲೇ ಶಿಕ್ಷಣ ಇಲಾಖೆ ಮಟ್ಟದಲ್ಲಿ ಹಲವು ಸುತ್ತಿನ ಸಭೆಗಳು ನಡೆದಿವೆ.
ಪಿಯುಸಿ ಪ್ರಿಪರೇಟರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಅಗತ್ಯ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ಬಂಧಿಸಿರುವುದು ಶಿಕ್ಷಣ ಇಲಾಖೆಯನ್ನು ಇನ್ನಷ್ಟು ಎಚ್ಚರಗೊಳಿಸಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ಕೊಡದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವುದೇ ಈ ನಿರ್ಧಾರದ ಮೂಲ ಉದ್ದೇಶವಾಗಿದೆ.
ಒಟ್ಟಿನಲ್ಲಿ, ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕೈಗೊಂಡಿರುವ ಈ ಕ್ರಮವು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಧ್ಯತೆ ಇದೆ.

ಶೂ, ಸಾಕ್ಸ್ ಬದಲಿಗೆ ಮಕ್ಕಳಿಗೆ ಚಪ್ಪಲಿ ಭಾಗ್ಯ?;ಶಿಕ್ಷಣ ಇಲಾಖೆ ಮಾಡ್ತಿರೊ ಪ್ಲಾನ್ ಏನು?

TAGGED:Background to the leak of the second PU question paper; Is the use of mobile phones completely banned in colleges?
Share This Article
Facebook Twitter Copy Link Print
Previous Article ಶೂ, ಸಾಕ್ಸ್ ಬದಲಿಗೆ ಮಕ್ಕಳಿಗೆ ಚಪ್ಪಲಿ ಭಾಗ್ಯ?;ಶಿಕ್ಷಣ ಇಲಾಖೆ ಮಾಡ್ತಿರೊ ಪ್ಲಾನ್ ಏನು?
Next Article ಬಿಗ್‌ ಬಾಸ್‌ ನಿಂದ ಬಂದ ಹಣವನ್ನು ಗಿಲ್ಲಿ ಏನ್ ಮಾಡ್ತಾರೆ?

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?