Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೂ, ಸಾಕ್ಸ್ ಬದಲಿಗೆ ಮಕ್ಕಳಿಗೆ ಚಪ್ಪಲಿ ಭಾಗ್ಯ?;ಶಿಕ್ಷಣ ಇಲಾಖೆ ಮಾಡ್ತಿರೊ ಪ್ಲಾನ್ ಏನು?
ಕರ್ನಾಟಕಪ್ರಮುಖ

ಶೂ, ಸಾಕ್ಸ್ ಬದಲಿಗೆ ಮಕ್ಕಳಿಗೆ ಚಪ್ಪಲಿ ಭಾಗ್ಯ?;ಶಿಕ್ಷಣ ಇಲಾಖೆ ಮಾಡ್ತಿರೊ ಪ್ಲಾನ್ ಏನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡುತ್ತಿದ್ದ ಶೂ ಮತ್ತು ಸಾಕ್ಸ್ ಬದಲು ಈ ಬಾರಿ ಚಪ್ಪಲಿ ನೀಡುವ ಸಾಧ್ಯತೆ ಇದೆ. ಈ ಯೋಜನೆಗೆ ಶಿಕ್ಷಣ ಇಲಾಖೆ ಪ್ಲಾನ್ ಮಾಡುತ್ತಿದ್ದು, ಹವಾಮಾನ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಸೌಕರ್ಯವಾಗುವಂತೆ ಈ ಬದಲಾವಣೆಯನ್ನು ತರಲು ಇಲಾಖೆ ತಯಾರಿ ನಡೆಸುತ್ತಿದೆ. ಇದಕ್ಕೆ ಬೇಡಿಕೆ ಇರುವ ಜಿಲ್ಲೆಗಳ ಮಾಹಿತಿ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ.
ಶೂ ಬದಲಿಗೆ ಚಪ್ಪಲಿ ನೀಡುವ ಈ ಯೋಜನೆಯು ವಿದ್ಯಾರ್ಥಿಗಳ ಆರೋಗ್ಯ ಮತ್ತು ಸೌಕರ್ಯಕ್ಕೆ ಆದ್ಯತೆ ನೀಡುವಂತಹದ್ದು ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಶಿಕ್ಷಣ ಇಲಾಖೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಒಂದು ಜೊತೆ ಶೂ ಮತ್ತು ಎರಡು ಜತೆ ಸಾಕ್ಸ್ ವಿತರಿಸುತ್ತಿತ್ತು. ಇದಕ್ಕೆ ನಿಗದಿಪಡಿಸಿದ ಮೊತ್ತವು ತರಗತಿಯ ಅನುಸಾರ ಬದಲಾಗುತ್ತದೆ. ಉದಾಹರಣೆಗೆ, 1ರಿಂದ 5ನೇ ತರಗತಿಯ ವಿದ್ಯಾರ್ಥಿಗೆ ತಲಾ 265 ರೂಪಾಯಿ, 6 ರಿಂದ 8ನೇ ತರಗತಿಗೆ 295 ರೂಪಾಯಿ ಮತ್ತು 9ರಿಂದ 10ನೇ ತರಗತಿಗೆ 325 ರೂಪಾಯಿ ನಿಗದಿಯಾಗಿತ್ತು. ಈ ಯೋಜನೆಯು ವಿದ್ಯಾರ್ಥಿಗಳಿಗೆ ಸಮವಸ್ತ್ರದ ಜೊತೆಗೆ ಪಾದರಕ್ಷೆಯನ್ನು ಉಚಿತವಾಗಿ ನೀಡುವ ಮೂಲಕ ಅವರ ಶೈಕ್ಷಣಿಕ ಜೀವನವನ್ನು ಸುಗಮಗೊಳಿಸುವ ಉದ್ದೇಶ ಹೊಂದಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ ಹವಾಮಾನದ ಕಾರಣದಿಂದ ಶೂ ಧರಿಸುವುದು ಕಷ್ಟಕರವಾಗಿದೆ ಎಂಬ ದೂರುಗಳು ಬರುತ್ತಿವೆ. ಈ ಕಾರಣಕ್ಕೆ ಶೂ ಬದಲು ಚಪ್ಪಲಿ ನೀಡುವ ಪ್ಲಾನ್ ಮಾಡಲಾಗುತ್ತಿದೆ.
ಬೇಸಿಗೆ ಮತ್ತು ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್ ಧರಿಸುವುದು ಅಸಾಧ್ಯವಾಗುತ್ತದೆ ಎಂಬುದು ಪ್ರಮುಖ ಕಾರಣ. ಮಳೆಗಾಲದಲ್ಲಿ ಸಾಕ್ಸ್ ಒದ್ದೆಯಾಗಿ ಸ್ಮೆಲ್ ಬರುವ ಸಾಧ್ಯತೆ ಇದೆ. ಬೇಸಿಗೆಯಲ್ಲಿ ದೀರ್ಘಕಾಲ ಶೂ ಧರಿಸಿದರೆ ಪಾದಕ್ಕೆ ಸೋಂಕು ತಗುಲುವ ಅಪಾಯವಿದೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಚಪ್ಪಲಿ ನೀಡುವ ಯೋಜನೆಯನ್ನು ಪರಿಗಣಿಸಿದೆ.

ಇನ್ನೂ ಚಪ್ಪಲಿಗೆ ಒಲವು ಯಾಕೆ ಎಂಬುದನ್ನು ನೋಡುವುದಾದರೆ, ಮಳೆ ಮತ್ತು ಬೇಸಿಗೆಯಲ್ಲಿ ಧರಿಸಲು ಸುಲಭ, ಸೋಂಕು ತಪ್ಪಿಸುವುದು ಮತ್ತು ಸಾಕ್ಸ್ ಸಮಸ್ಯೆ ಇಲ್ಲದಿರುವುದು ಪ್ರಮುಖ ಕಾರಣಗಳು. ಈ ಯೋಜನೆಯನ್ನು ಜಾರಿಗೆ ತರಲು ಇಲಾಖೆ ಸಕ್ರಿಯವಾಗಿದೆ. ಬೇಡಿಕೆ ಇರುವ ಜಿಲ್ಲೆಗಳ ಮಾಹಿತಿ ಸಂಗ್ರಹಕ್ಕೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಉರ್ದು ಮತ್ತು ಇತರೆ ಅಲ್ಪ ಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯಕ್ಕೂ ಇದೇ ಸೂಚನೆ ಹೋಗಿದೆ. ಅಂತಹ ಜಿಲ್ಲೆಗಳ ಪಟ್ಟಿ ಮಾಡಿ, ಹವಾಮಾನ ಅನುಗುಣವಾಗಿ ಚಪ್ಪಲಿ ನೀಡುವ ತಯಾರಿ ನಡೆಯುತ್ತಿದೆ. ಈ ಮಾಹಿತಿ ಕಲೆ ಹಾಕಿ, ಯಾವ ಜಿಲ್ಲೆಗಳಲ್ಲಿ ಚಪ್ಪಲಿ ಅಗತ್ಯವಿದೆ ಎಂಬುದನ್ನು ತಿಳಿದುಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸುವ ಉದ್ದೇಶವಿದೆ.
ಈ ಯೋಜನೆ ಹೊಸದಲ್ಲ. 2015ರಲ್ಲಿಯೂ ಶೂ ಬದಲು ಚಪ್ಪಲಿ ನೀಡುವ ಯೋಜನೆ ಇತ್ತು. ಆದರೆ ಕಾರಣಾಂತರಗಳಿಂದ ಅದನ್ನು ಕೈಬಿಡಲಾಗಿತ್ತು. ಈಗ ಮತ್ತೆ ಈ ಯೋಜನೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸೌಕರ್ಯ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ಯೋಜನೆ ಜಾರಿಯಾದರೆ, ವಿದ್ಯಾರ್ಥಿಗಳಿಗೆ ಹೆಚ್ಚು ಸೌಕರ್ಯವಾಗುತ್ತದೆ ಮತ್ತು ಶಾಲಾ ದಿನಗಳು ಸುಗಮವಾಗುತ್ತವೆ ಎಂಬ ನಿರೀಕ್ಷೆ ಇದೆ.

HEALTH CARE ಯುವತಿಯರೇ, ಈ ಕಾಯಿಲೆ ಬಂದರೆ ಭಯ ಬೀಳೋದು ಬೇಡ

TAGGED:Children will get slippers instead of shoes and socks?; What is the plan of the Education Department?
Share This Article
Facebook Twitter Copy Link Print
Previous Article ಪತ್ನಿ ಮೂಲಕ ಹನಿ ಟ್ರ್ಯಾಪ್ – ವಿಡಿಯೋ ತೋರಿಸಿ ಬ್ಲಾಕ್ ಮೇಲ್, ಪತಿಯೇ ಸೂತ್ರಧಾರ
Next Article ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ; ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?