Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಕೊಟ್ಟ ಭಾಷಣ ಮಾಡದೇ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಅವರು ರೆಡಿ ಮಾಡಿಕೊಂಡ ಭಾಷಣವನ್ನು ಓದುವಂತಿಲ್ಲ. ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದರು.
ಮನ್ ರೇಗಾ ಬದಲಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಪಾಲರು ಭಾಷಣ ಮಾಡವುದು ಕರ್ತವ್ಯ ಎಂದು ಹೇಳಿದ್ದಾರೆ.
ರಾಜ್ಯಪಾಲರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಹರಿಪ್ರಸಾದ್ ಮತ್ತು ಇತರ ಕಾಂಗ್ರೆಸ್ ನಾಯಕರು, ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ರಾಜ್ಯಪಾಲರು ಅದಕ್ಕೆ ಸ್ಪಂದಿಸದೆ ನಿರ್ಗಮಿಸಿದರು.
ರಾಜ್ಯಪಾಲರನ್ನು ತಡೆಯುವ ವೇಳೆ ಬಿ.ಕೆ ಹರಿಪ್ರಸಾದ್ ಬಟ್ಟೆ ಹರಿದಿದ್ದು, ಭಾರಿ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರನ್ನು ಅಡ್ಡಗಟ್ಟುವ ವೇಳೆ ಬಿ.ಕೆ ಹರಿಪ್ರಸಾದ್ ಅವರ ಶರ್ಟ್ ಕೂಡ ಹರಿದಿದೆ ಎನ್ನಲಾಗಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್ , ಬಿಜೆಪಿಯವರೇ ನನ್ನ ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದಾರೆ.
https://x.com/BJP4Karnataka/status/2014228414186811784?s=20
https://www.newsics.com/2026/01/22/husband-killed-along-with-lover-wife-watched-porn-video-at-night/