Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಉಡುಪಿ: ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಅವರಿಗೆ ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಮೆರವಣಿಗೆ ಸಂದರ್ಭದಲ್ಲಿ ಕೈಯಲ್ಲಿ ಬಂಗುಡೆ ಮೀನು ಹಿಡಿದು ರಕ್ಷಿತಾ ಶೆಟ್ಟಿ ಸಂಭ್ರಮಿಸಿದ್ದಾರೆ.
ಹೆಜಮಾಡಿ ಟೋಲ್ನಿಂದ ಪಡುಬಿದ್ರೆಯವರೆಗೆ ರಕ್ಷಿತಾ ಶೆಟ್ಟಿ ಅವರನ್ನು ಮೆರವಣಿಗೆಯೊಂದಿಗೆ ಕರೆ ತಂದಿದ್ದಾರೆ. ತೆರೆದ ವಾಹನ ಏರಿದ ರಕ್ಷಿತಾ ಅವರು ಅಭಿಮಾನಿಗಳಿಗೆ ಕೈ ಬೀಸಿದ್ದಾರೆ.
ರಕ್ಷಿತಾ ಶೆಟ್ಟಿ ಬಿಗ್ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದೇ ರೋಚಕ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟು ರೀ ಎಂಟ್ರಿ ಆಗಿ ಕೊನೆಯ ದಿನದವರೆಗೂ ಇದ್ದರು. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳ ಹೊರತಾಗಿಯೂ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಪ್ರೇಕ್ಷಕರನ್ನು ರಂಜಿಸಿ ಮನಗೆದ್ದರು. ಇವರ ಸಹಜತೆ ಮತ್ತು ಮುಗ್ಧತೆ ಬಿಗ್ಬಾಸ್ ಆಟದಲ್ಲಿ ವಿಶೇಷವಾಗಿ ಗಮನ ಸೆಳೆದಿತ್ತು.
ರಕ್ಷಿತಾ ಅವರಿಗೆ ಸಾಯಿ ಗೋಲ್ಡ್ ಪ್ಯಾಲೆಸ್ ವತಿಯಿಂದ 20 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯ್ತು. ಖುದ್ದು ಟಿಎ ಶರವಣ ಅವರು ವೇದಿಕೆಗೆ ಆಗಮಿಸಿ ರಕ್ಷಿತಾ ಅವರಿಗೆ 20 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಿದರು. ಅದಾದ ಬಳಿಕ ಜಾರ್ ಅಪ್ಲಿಕೇಶನ್ನ ವತಿಯಿಂದ ರಕ್ಷಿತಾ ಅವರಿಗೆ ಐದು ಲಕ್ಷ ರೂಪಾಯಿ ನಗದು ಹಣವನ್ನು ಉಡುಗೊರೆಯಾಗಿ ಸಹ ನೀಡಲಾಯ್ತು.
https://www.instagram.com/reel/DTxhNV9kwzW/?igsh=MWo5YzRkYzUyY2R6eQ==