Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕನ್ನಡ ಚಿತ್ರರಂಗಕ್ಕೆ ‘ಬೆಲ್ ಬಾಟಮ್’ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರು ಏಳು ವರ್ಷಗಳ ವಿರಾಮದ ಬಳಿಕ ತಮ್ಮದೇ ಗೋಲ್ಡನ್ ಹಾರ್ಸ್ ಬ್ಯಾನರ್ ಅಡಿಯಲ್ಲಿ ಮತ್ತೊಂದು ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಹುಬ್ಬಳ್ಳಿ ಹಂಟರ್ಸ್ ಎಂದು ಶೀರ್ಷಿಕೆ ಇಡಲಾಗಿದೆ.
ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್ ಮೂಲಕ ನಿರ್ಮಾಪಕ ಸಂತೋಷ್ ಕುಮಾರ್ ಅವರು ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಸಿನಿಮಾಗೆ ‘ಎಡಗೈ ಅಪಘಾತಕ್ಕೆ ಕಾರಣ’ ಖ್ಯಾತಿಯ ನಿರ್ದೇಶಕರು ಸಾಥ್ ಕೊಟ್ಟಿದ್ದಾರೆ. ಹೌದು, ಕಳೆದ ವರ್ಷ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಮಾಡಿ ಗಮನ ಸೆಳೆದ ಸಮರ್ಥ್ ಬಿ. ಕಡಕೋಳ ಅವರು ಈಗ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲು ಸಜ್ಜಾಗಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ಶೆಟ್ಟಿ ಅವರು ಹುಬ್ಬಳ್ಳಿ ಹಂಟರ್ಸ್ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇನ್ನು ಮಹಾನಟಿ ಖ್ಯಾತಿಯ ನಟಿ ಧನ್ಯಶ್ರೀ ಸುಜಿತ್ ಅವರು ಪ್ರಮುಖ ಮಹಿಳಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿತ್ರದ ಸಂಭಾಷಣೆ ವಿಭಾಗದಲ್ಲಿ ನಿರ್ದೇಶಕ ಸಮರ್ಥ್ ಬಿ. ಕಡಕೋಳ್ ಜೊತೆಗೆ ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಕೈಜೋಡಿಸಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಹುಬ್ಬಳ್ಳಿ ಹಂಟರ್ಸ್ ಚಿತ್ರದ ಶೂಟಿಂಗ್ ಇದೇ ತಿಂಗಳ 26ರಿಂದ ಆರಂಭವಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
https://www.newsics.com/2026/01/23/how-much-is-the-chain-around-gillys-neck-worth/