Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ
ಕರ್ನಾಟಕಪ್ರಮುಖ

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ

Share
2 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್‌ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ಪರಿಷತ್ತಿನ ಸದಸ್ಯರಿಗೆ ವಿನಂತಿಸಿಕೊಂಡಾಗ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಬೇಕಾಗುತ್ತದೆ.
ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ಮುಂದೆ ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ, ಪರಿಷತ್ತಿನ ಸದಸ್ಯರು, ಸಂಸದರ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆ ಹೊರಡಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?

TAGGED:Government officials must now accept phone calls from public representatives; state government orders
Share This Article
Facebook Twitter Copy Link Print
Previous Article ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?
Next Article ವೇದಿಕೆ ಮೇಲೆಯೇ ಕಣ್ಣೀರಿಟ್ಟ ರಾಧಾ ಭಗವತಿ; ಕಾರಣವೇನು?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?