Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ
ಕರ್ನಾಟಕಪ್ರಮುಖ

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ

Share
2 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.
ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್‌ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ಪರಿಷತ್ತಿನ ಸದಸ್ಯರಿಗೆ ವಿನಂತಿಸಿಕೊಂಡಾಗ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಬೇಕಾಗುತ್ತದೆ.
ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ಮುಂದೆ ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ, ಪರಿಷತ್ತಿನ ಸದಸ್ಯರು, ಸಂಸದರ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆ ಹೊರಡಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?

TAGGED:Government officials must now accept phone calls from public representatives; state government orders
Share This Article
Facebook Twitter Copy Link Print
Previous Article ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?
Next Article ವೇದಿಕೆ ಮೇಲೆಯೇ ಕಣ್ಣೀರಿಟ್ಟ ರಾಧಾ ಭಗವತಿ; ಕಾರಣವೇನು?

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?