https://youtube.com/shorts/yWrDals90_k?si=qTyTxtvMLgrsr7gN
Subscribe ನ್ಯೂಸಿಕ್ಸ್ ಕನ್ನಡ
newsics.com
ಬಾಂಗ್ಲಾದೇಶದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ನಡುವೆಯೇ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತೊಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದ ನರ್ಸಿಂಗ್ಡಿ ನಗರದಲ್ಲಿ 23 ವರ್ಷದ ಹಿಂದೂ ಯುವಕನನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ.
ಮೃತನನ್ನು ಚಂಚಲ್ ಚಂದ್ರ ಭೌಮಿಕ್ (23) ಎಂದು ಗುರುತಿಸಲಾಗಿದೆ. ಅವರು ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದ ನಿವಾಸಿ ಖೋಕನ್ ಚಂದ್ರ ಭೌಮಿಕ್ ಅವರ ಪುತ್ರ.
ನರ್ಸಿಂಗ್ಡಿ ಪೊಲೀಸ್ ಲೈನ್ಸ್ ವ್ಯಾಪ್ತಿಯ ಖಾನಾಬರಿ ಮಸೀದಿ ಮಾರುಕಟ್ಟೆ ಪ್ರದೇಶದಲ್ಲಿರುವ ಗ್ಯಾರೇಜ್ನಲ್ಲಿ ಅವರು ಕೆಲಸ ಮಾಡುತ್ತಿದ್ದರು.
ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಗ್ಯಾರೇಜ್ ಒಳಗೇ ಮಲಗಿದ್ದ ಚಂಚಲ್ ಚಂದ್ರ ಭೌಮಿಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಗ್ಯಾರೇಜ್ ಒಳಗೆ ಪೆಟ್ರೋಲ್, ಎಂಜಿನ್ ಎಣ್ಣೆ ಸೇರಿದಂತೆ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿದ್ದುದರಿಂದ ಬೆಂಕಿ ಕ್ಷಿಪ್ರವಾಗಿ ವ್ಯಾಪಿಸಿದೆ. ಈ ಘಟನೆಯಲ್ಲಿ ಚಂಚಲ್ ಚಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಭದ್ರತೆ ಕುರಿತು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
GOOD DAY | Today’s Horoscope ಶುಭ ದಿನ ಇಂದಿನ ರಾಶಿ ಭವಿಷ್ಯ, 25-01-2026, ಭಾನುವಾರ
ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ, ಅತ್ತೆ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ