https://youtube.com/shorts/gtZudXyWr4w?si=M1ZsLYs2SqjhXrAv
Subscribe ನ್ಯೂಸಿಕ್ಸ್ ಕನ್ನಡ
newsics.com
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಪ್ರಮಾಣವೂ ತುಸು ಏರಿಕೆಯಾಗತ್ತೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6-3°C ಕಡಿಮೆ ಆಗಿದ್ದು. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6°-3.0°C ಹೆಚ್ಚಾಗಲಿದೆ. ದಕ್ಷಿಣ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ 3.1°-5.0°C ಹೆಚ್ಚಾಗಲಿದೆ. ಇನ್ನು ಕರ್ನಾಟಕದ ದಕ್ಷಿಣದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ತಮಿಳುನಾಡಿನಿಂದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮತ್ತು ಶ್ರೀಲಂಕಾಕ್ಕೆ ಹೊಂದಿಕೊಂಡಿರುವ ಪೂರ್ವ ದಿಕ್ಕಿನಲ್ಲಿರುವ ವಾಯುಭಾರ ಕುಸಿತವು ಈಗ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮಳೆ ಬರುವ ಸಾಧ್ಯತೆಯೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರಗಳಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಿದೆ. ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮೀಣ ಪ್ರದೇಶ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರುವ ಸಾಧ್ಯತೆ ಇದೆ. ಉಳಿದಂತೆ ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.
Relationship/ Anusha Hegde ದಾಂಪತ್ಯ ಜೀವನ ಅಂತ್ಯಗೊಳಿಸಿದ ನಟಿ ಅನುಷಾ ಹೆಗಡೆ! ಐದು ವರ್ಷದ ಸಂಸಾರಕ್ಕೆ ವಿದಾಯ