Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?
ದೇಶಪ್ರಮುಖ

ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?

Share
2 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಇಬ್ಬರು ಹೆಂಡಿರ ಜಗಳ ಸಮಸ್ಯೆ ಬಗೆಹರಿಸಲು ಗಂಡನನ್ನೇ ಊರಿನ ಮುಖಂಡರು ಪಾಲು ಮಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಎರಡು ಮದುವೆಯಾಗಿದ್ದು, ಆತನ ಜೊತೆ ಸಮಯ ಕಳೆಯುವುದಕ್ಕಾಗಿ ಇಬ್ಬರು ಹೆಂಡಿರ ಮಧ್ಯೆ ಪ್ರತಿದಿನವೂ ಗಲಾಟೆ ನಡೆಯುತ್ತಿತ್ತು.
ಈ ಇಬ್ಬರು ಹೆಂಡಿರ ಮುದ್ದಿನ ಗಂಡನ ಸಂಸಾರದ ಗಲಾಟೆಯಿಂದ ಬೇಸತ್ತು ಹೋದ ಗ್ರಾಮಸ್ಥರು ಈ ಸಮಸ್ಯೆಗೊಂದು ಮುಕ್ತಿ ಕಾಣಿಸಬೇಕು ಎಂದು ಪಂಚಾಯ್ತಿ ನಡೆಸಿದ್ದು, ವಿಲಕ್ಷಣವಾದ ನಿರ್ಧಾರ ಕೈಗೊಂಡಿದ್ದಾರೆ. ಇಬ್ಬರು ಹೆಂಡಿರಿಗಾಗಿ ಗಂಡನ ಆಸ್ತಿ ಪಾಲು ಮಾಡುವ ಬದಲು ಗ್ರಾಮದ ಮುಖಂಡರು ಗಂಡನನ್ನೇ ಪಾಲು ಮಾಡಿದ್ದಾರೆ. ಹೌದು ಅಚ್ಚರಿ ಎನಿಸಿದರು ಸತ್ಯ ಗಂಡ ಇಬ್ಬರಿಗೂ ಸಮವಾಗಿ ಸಮಯ ನೀಡಬೇಕು ಎಂಬ ಉದ್ದೇಶದಿಂದ ಹಾಗೂ ಹೆಚ್ಚು ಕಡಿಮೆ ಎಂದು ಹೆಂಡತಿಯರು ಜಗಳ ಮಾಡಬಾರದು ಎಂದು ಗ್ರಾಮದ ಮುಖ್ಯಸ್ಥರು ಗಂಡನನ್ನು ಎರಡು ಪಾಲುಗಳಾಗಿ ವಿಂಗಡಿಸಿದ್ದಾರೆ.
ಅಜಿಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗ್ಲಿಯಾ ಅಖಿಲ್‌ ಗ್ರಾಮದಲ್ಲಿಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಎರಡು ಮದುವೆಯಾಗಿದ್ದ. ಮೊದಲನೇಯದ್ದು ಕುಟುಂಬವೇ ನಿಶ್ಚಯಿಸಿದ ವಿವಾಹವಾಗಿದ್ದರೆ, ಮತ್ತೊಂದು ಪ್ರೇಮ ವಿವಾಹವಾಗಿತ್ತು. ಇಬ್ಬರು ಮಹಿಳೆಯರು ಗಂಡನ ಮೇಲಿನ ತಮ್ಮ ಹಕ್ಕಿಗಾಗಿ ಗಲಾಟೆ ಮಾಡುತ್ತಿದ್ದರು. ಹೀಗಾಗಿ ಇಬ್ಬರ ನಡುವೆ ಸಿಲುಕಿ ಗಂಡ ನಲುಗಿ ಹೋಗಿದ್ದ. ಪ್ರತಿದಿನವೂ ಮನೆಯಲ್ಲಿ ದೊಡ್ಡ ಗಲಾಟೆ ನಡೆದಿತ್ತು. ಹೀಗಾಗಿ ನೆರೆಹೊರೆಯ ಮನೆಯವರಿಗೆ ಇದೊಂದು ಬಿಟ್ಟಿ ಮನೋರಂಜನೆಯಾಗಿತ್ತು. ನೆರೆಹೊರೆಯವರಿಗೆ ಸಂಜೆಯ ಮನರಂಜನೆಗಾಗಿ ಟಿವಿ ಅಗತ್ಯವಿಲ್ಲದಂತಾಯಿತು ಎಂದು ನಿವಾಸಿಗಳು ಹೇಳುತ್ತಾರೆ. ಪ್ರತಿದಿನವೂ ಗಲಾಟೆ ನಡೆಯಲು ಶುರುವಾದಾಗ ಇಬ್ಬರು ಪತ್ನಿಯರು ಪತಿಯನ್ನು ಎಳೆದುಕೊಂಡು ಅಜೀಮ್ ನಗರ ಪೊಲೀಸ್ ಠಾಣೆಗೆ ಮೆರವಣಿಗೆ ನಡೆಸಿ, ತಮ್ಮ ಕಸ್ಟಡಿಗೆ ನೀಡುವಂತೆ ಒತ್ತಾಯಿಸಿದ್ದಾರೆ.
ಯಾವುದೇ ರೂಲ್ಸ್‌ ಬುಕ್‌ನಲ್ಲಿ ಇರದ ಈ ಸಮಸ್ಯೆಯನ್ನು ಕಂಡ ಪೊಲೀಸರು ಈ ವಿಚಾರವನ್ನು ಗ್ರಾಮಸ್ಥರಿಗೆ ಬಿಡುವುದು ಉತ್ತಮ ಎಂದು ನಿರ್ಧಾರ ಮಾಡಿದರು. ನಂತರ ಇಬ್ಬರೂ ಪತ್ನಿಯರು ಮತ್ತು ಅವರ ಕುಟುಂಬಗಳ ಸಮ್ಮುಖದಲ್ಲಿ ಗ್ರಾಮಸ್ಥರು ಪಂಚಾಯ್ತಿ ಮಾಡಿದ್ದು, ಇವರ ಸಮಸ್ಯೆ ಬಗೆಹರಿಸುವುದಕ್ಕಾಗಿ ಗ್ರಾಮದ ಮುಖಂಡರು ವಿಚಿತ್ರವೆನಿಸುವ ನಿರ್ಧಾರವನ್ನು ಕೈಗೊಂಡರು.
ಗ್ರಾಮದ ಮುಖಂಡರು ಮಾಡಿದ ಬರಹ ರೂಪದ ನಿಯಮದ ಪ್ರಕಾರ ಆ ವ್ಯಕ್ತಿ ತನ್ನ ಮೊದಲ ಹೆಂಡತಿ ಬಳಿ ಸೋಮವಾರ, ಮಂಗಳವಾರ, ಬುಧವಾರ ಇದ್ದಾರೆ. ಗುರುವಾರ ಶುಕ್ರವಾರ ಶನಿವಾರ 2ನೇ ಪತ್ನಿ ಜೊತೆ ಇರಬೇಕು. ಹಾಗೂ ಭಾನುವಾರ ಆತನಿಗೆ ಇಷ್ಟಬಂದಂತೆ ಇರಬಹುದು, ಭಾನುವಾರ ಆತನಿಗೆ ಸ್ವಾತಂತ್ರ ದಿನ. ಆದರೆ ಉಳಿದ ಆರು ದಿನಗಳನ್ನು ಆತ ಗ್ರಾಮದ ಮುಖಂಡರು ಮಾಡಿದ ನಿರ್ಧಾರದಂತೆ ಕೈಗೊಳ್ಳಬೇಕು ಎಂದು ಘೋಷಣೆ ಮಾಡಿದರು.
ನಂತರ ಈ ಒಪ್ಪಂದವನ್ನು ಕಾಗದದ ಮೇಲೆ ಬರೆದು ಆ ವ್ಯಕ್ತಿ ಮತ್ತು ಇಬ್ಬರೂ ಪತ್ನಿಯರು ಸಹಿ ಹಾಕಿದರು. ಈ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಅತ್ಯಂತ ಸೃಜನಶೀಲ ನಿರ್ಧಾರ ಎಂದು ನೆಟ್ಟಿಗರು ಕರೆದಿದ್ದಾರೆ. ಈ ವಿಚಾರವೀಗ ಟಾಕ್ ಆಫ್ ದಿ ಟೌನ್ ಆಗಿದ್ದು, ಜನ ವಿವಿಧ ರೀತಿಯ ಕಾಮೆಂಟ್ ಮಾಡ್ತಿದ್ದಾರೆ. ಹೀಗಿದ್ದುಇದು ಅನೇಕರ ಕನಸು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಹಾಗೆಯೇ ಮತ್ತೊಬ್ಬರು ಮದುವೆಯ ಗೋಜಿಗೆ ಹೋಗಬೇಡಿ ಸಿಂಗಲ್ ಆಗಿರಿ ಸುಖವಾಗಿರಿ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಅವರಿಗೆ ವೀಕಾಫ್ ಕೂಡ ಕೊಡಲಾಗಿದೆ ಎಂದು ಒಬ್ಬರು ಹಾಸ್ಯಮಯವಾಗಿ ಒಬ್ಬರು ಕಾಮೆಂಟ್ ಮಾಡಿದ್ದಾರೆ.

ಭಾರತ-ಯುರೋಪ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಪ್ರಧಾನಿ ಮೋದಿ ಹೇಳಿದ್ದೇನು?

TAGGED:Two women fight over a beloved husband: What did the village leaders do to resolve the problem?
Share This Article
Facebook Twitter Copy Link Print
Previous Article ಭಾರತ-ಯುರೋಪ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಪ್ರಧಾನಿ ಮೋದಿ ಹೇಳಿದ್ದೇನು?
Next Article ಸರ್ಕಾರಿ ಶಾಲೆಯಲ್ಲಿ ಕೊಟ್ಟ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?