https://youtube.com/shorts/2dkIPQOWaBI?si=yWrxSqwrmu8x_ve-
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಭಾರೀ ಬೇಡಿಕೆಯ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಅರಿಜಿತ್ ಸಿಂಗ್ ಅವರ ಈ ನಿರ್ಧಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಅವರು ಇನ್ಸ್ಟಾಗ್ರಾಮ್ನಲ್ಲಿ ಈ ಸುದ್ದಿ ಹಂಚಿಕೊಂಡಿದ್ದಾರೆ. ಕೇಳುಗರ ಪ್ರೀತಿಗೆ ಧನ್ಯವಾದ ತಿಳಿಸಿ, ತಮ್ಮ ಪಯಣಕ್ಕೆ ವಿದಾಯ ಹೇಳಿದ್ದಾರೆ.
ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಅವರು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಏಕಾಏಕಿ ಅವರು ನಿವೃತ್ತಿ (Arijit Singh Retirement) ಘೋಷಿಸಿದ್ದಾರೆ.
ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್ ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ ಅವರು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಅರಿಜಿತ್ ಸಿಂಗ್ ಅವರು ಸೋಶಿಯಲ್ ಮೀಡಿಯಾದಲ್ಲಿ, ‘ಇದನ್ನು ನಿಲ್ಲಿಸುತ್ತಿದ್ದೇನೆ. ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ಇಷ್ಟೊಂದು ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಈ ಪ್ರಯಾಣ ಅದ್ಭುತವಾಗಿತ್ತು’ ಎಂದು ಅರಿಜಿತ್ ಸಿಂಗ್ ಅವರು ಪೋಸ್ಟ್ ಮಾಡಿದ್ದಾರೆ.
‘ದೇವರು ನನಗೆ ಕರುಣಾಮಯನಾಗಿದ್ದ. ನಾನು ಒಳ್ಳೆಯ ಸಂಗೀತದ ಅಭಿಮಾನಿ. ಮುಂದಿನ ದಿನಗಳಲ್ಲಿ ಹೆಚ್ಚು ಕಲಿಯುತ್ತೇನೆ. ಚಿಕ್ಕ ಕಲಾವಿದನಾಗಿ ಇನ್ನಷ್ಟು ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಈಗಾಗಲೇ ಒಪ್ಪಿಕೊಂಡ ಕೆಲಸಗಳನ್ನು ನಾನು ಮುಗಿಸಬೇಕಿದೆ. ಅವುಗಳನ್ನು ಪೂರ್ಣಗೊಳಿಸುತ್ತೇನೆ. ಹಾಗಾಗಿ ಈ ವರ್ಷ ನಿಮಗೆ ಕೆಲವು ಹೊಸ ಹಾಡುಗಳು ಸಿಗುತ್ತವೆ. ಆದರೆ ಒಂದು ಸ್ಪಷ್ಟನೆ, ಸಂಗೀತದ ಕೆಲಸವನ್ನು ನಾನು ನಿಲ್ಲಿಸುವುದಿಲ್ಲ’ ಎಂದು ಅರಿಜಿತ್ ಸಿಂಗ್ ಹೇಳಿದ್ದಾರೆ.
ಕನ್ನಡದಲ್ಲಿ ‘ನಿನ್ನಿಂದಲೇ’ ಸಿನಿಮಾದ ‘ಮೌನ ತಾಳಿತೆ..’ ಹಾಡು ಅರಿಜಿತ್ ಸಿಂಗ್ ಅವರ ಕಂಠದಲ್ಲಿ ಮೂಡಿಬಂದಿತ್ತು.
ಹಿಂದಿ, ಬೆಂಗಾಲಿ, ತಮಿಳು, ತೆಲುಗು ಹಾಡುಗಳಿಗೂ ಕೂಡ ಅರಿಜಿತ್ ಸಿಂಗ್ ಅವರು ಧ್ವನಿ ನೀಡಿದ್ದಾರೆ. ಆದರೆ ನಿವೃತ್ತಿಯ ದಿಢೀರ್ ನಿರ್ಧಾರಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಮದುವೆಯಾಗಿ ಗಂಡನ ಮನೆಗೆ ಕಾಲಿಡುತ್ತಿದ್ದಂತೆ ಮಗುವಿಗೆ ಜನ್ಮ ನೀಡಿದ ನವವಿವಾಹಿತೆ