https://youtube.com/shorts/Dd-eFU1bWK0?si=V8XveUVnrusgElLv
Subscribe ನ್ಯೂಸಿಕ್ಸ್ ಕನ್ನಡ
newsics.com
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಇಂದು ಭೀಕರ ಅಪಘಾತಕ್ಕೆ ತುತ್ತಾಗಿದೆ. ಈ ದುರಂತದಲ್ಲಿ 66 ವರ್ಷದ ಅಜಿತ್ ಪವಾರ್ ಅವರು ಮೃತಪಟ್ಟಿದ್ದಾರೆ. ಈ ಸುದ್ದಿ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದು, ವಿಮಾನ ದುರಂತದ ಬಗ್ಗೆ ಚರ್ಚೆಯು ಶುರು ಆಗಿದೆಹಾಗಾದ್ರೆ ಆ ವಿಮಾನ ಅಪಘಾತದ ಸಂದರ್ಭದಲ್ಲಿ ಆಗಿದ್ದೇನು?
ಅಜಿತ್ ಪವಾರ್ ಬಾರಾಮತಿಯಲ್ಲಿ ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಹಲವು ಸಭೆಗಳಲ್ಲಿ ಭಾಗವಹಿಸಬೇಕಿತ್ತು. ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ವಿಮಾನದಲ್ಲಿ ಅಜಿತ್ ಪವಾರ್ ಸೇರಿದಂತೆ ಒಟ್ಟು 6 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆ ಮುಂಬೈನಿಂದ ಬಾರಾಮತಿಗೆ ಸುಮಾರು 8.10 ಗಂಟೆಗೆ ಹೊರಟ ವಿಮಾನ ಕೇವಲ 40-45 ನಿಮಿಷದಲ್ಲಿ ಪತನಗೊಂಡಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆ 8:10ರ ಸುಮಾರಿಗೆ: ಮುಂಬೈನಿಂದ ಬಾರಾಮತಿಗೆ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ ವಿಮಾನ ಹೊರಟಿತು. ವಿಮಾನದಲ್ಲಿ ಅಜಿತ್ ಪವಾರ್, ಇಬ್ಬರು ಪರ್ಸನಲ್ ಅಸಿಸ್ಟೆಂಟ್ (ಪಿಎ), ಇಬ್ಬರು ಪೈಲಟ್ ಮತ್ತು ಒಬ್ಬ ಎನ್ಸಿಪಿ ನಾಯಕ ಸೇರಿ ಒಟ್ಟು 6 ಜನರು ಇದ್ದರು.
ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಪ್ರಯತ್ನ ಮಾಡಿತು. ಲ್ಯಾಂಡಿಂಗ್ ಸಮಯದಲ್ಲಿ ವಿಮಾನವು ನಿಯಂತ್ರಣ ತಪ್ಪಿ ರನ್ವೇಯಿಂದ ಹೊರಗೆ ಹೋಗಿದೆ. ರನ್ವೇನಿಂದ ಹೊರಗೆ ಬಿದ್ದ ವಿಮಾನ ಭೀಕರವಾಗಿ ಪತನಗೊಂಡಿತು. ಘಟನಾ ಸ್ಥಳದಲ್ಲಿ ವಿಮಾನದ ಅವಶೇಷಗಳು ಚದುರಿಕೊಂಡಿದ್ದು, ತಕ್ಷಣವೇ ವಿಮಾನದಿಂದ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು.
ರಕ್ಷಣಾ ತಂಡಗಳು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು. ಆದರೆ ಅಪಘಾತದ ತೀವ್ರತೆಯಿಂದಾಗಿ ವಿಮಾನದಲ್ಲಿದ್ದ ಎಲ್ಲಾ 6 ಮಂದಿಯೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು ಎಂದು ತಿಳಿದುಬಂದಿದೆ. ಅಜಿತ್ ಪವಾರ್ ಅವರು ಸಹ ಈ ದುರಂತದಲ್ಲಿ ಬಲಿಯಾಗಿದ್ದಾರೆ ಎಂದು ದೃಢಪಟ್ಟಿದೆ.
https://www.newsics.com/2026/01/28/ajit-pawars-body-is-completely-burnt/