Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?
ಕರ್ನಾಟಕಪ್ರಮುಖ

ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?

Share
2 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ, ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ತಲೆಗೆ ಗುಂಡು ಹೊಡೆದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾರೆ.

ಐಟಿ ದಾಳಿ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಶಂಕಿಸಲಾಗಿದೆ‌.

ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಯಲ್ಲೇ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿದ್ದಾರೆ.

ಪಿಸ್ತೂಲ್‌ನಿಂದ ಶೂಟ್ ಮಾಡಿಜೊಂಡ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಜೆ ಅಶೋಕನಗರ ಪೊಲೀಸರು ಭೇಟಿ ನೀಡಿದ್ದಾರೆ.

ಕೇರಳ ಮೂಲದ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.

ಶುಕ್ರವಾರ ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯ ತೆರಿಗೆ ಇಲಾಖೆಯಿಂದ ಪದೇ ಪದೇ ಆದ ದಾಳಿಗಳಿಂದ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ನಗರದಲ್ಲಿ ಇವರ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಇದ್ದವು. ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೃತರಿಗೆ ಪತ್ನಿ ಲಿನಿ ರಾಯ್, ರೋಹಿತ್ ಮತ್ತು ರಿಯಾ ಎಂಬ ಇಬ್ಬರು ಮಕ್ಕಳು ಇದ್ದರು. ಮಗ ರೋಹಿತ್, ಕಾನ್ಫಿಡೆಂಟ್ ಗ್ರೂಪ್‌ನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ವಿನ್ಯಾಸ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ.

2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.

ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್‌ನ SBS ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದಾರೆ.

ಸಿ.ಜೆ. ರಾಯ್ ಅವರು ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದು, ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಿದ್ದಾರೆ. ಅಲ್ಲದೆ, ಅವರು ಸ್ಲೋವಾಕ್ ಗಣರಾಜ್ಯದ ಗೌರವ ಕಾನ್ಸಲ್ ಆಗಿಯೂ ಕರ್ನಾಟಕ ಮತ್ತು ಕೇರಳದಲ್ಲಿ ಸೇವೆ ಸಲ್ಲಿಸಿದ್ದರು. ರಾಯ್ ಅವರು ಕಾರುಗಳ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು, ದುಬೈ ಮತ್ತು ಭಾರತದಲ್ಲಿ ಹಲವು ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು.

ಕಾನ್ಫಿಡೆಂಟ್ ಗ್ರೂಪ್ 165 ಯೋಜನೆಗಳನ್ನು ಪೂರ್ಣಗೊಳಿಸಿದೆ, 43 ಮಿಲಿಯನ್ ಚದರ ಅಡಿಗಳಿಗಿಂತ ಹೆಚ್ಚು ಅಭಿವೃದ್ಧಿಪಡಿಸಿದೆ. 15,000 ಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ಉದ್ಯಮಶೀಲತೆಯ ಜೊತೆಗೆ, ಡಾ. ರಾಯ್ ಅವರು ಮನರಂಜನೆ, ಶಿಕ್ಷಣ, ಆತಿಥ್ಯ, ಗಲ್ಫ್, ಚಿಲ್ಲರೆ ವ್ಯಾಪಾರ ಮತ್ತು ಅಂತರರಾಷ್ಟ್ರೀಯ ವ್ಯಾಪಾರದಂತಹ ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮ ವ್ಯಾಪಾರವನ್ನು ವಿಸ್ತರಿಸಿದ್ದರು.

ಒಂದೇ ಕುಟುಂಬದ 11 ಜನರಿಗೆ ಮರಣದಂಡನೆ ನೀಡಿದ ಸರ್ಕಾರ

TAGGED:owner of Confident Group commits suicideReal estate entrepreneurwhat is the reason?
Share This Article
Facebook Twitter Copy Link Print
Previous Article ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ
Next Article ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಸತ್ಯ ಕಕ್ಕಿದ ಹೇಗೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?