https://youtube.com/shorts/kIkAyfI4sxw?si=aggVueBL3fodeELS
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಸಾವಿನ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿವೆ.
ಒಂದೆಡೆ ಐಟಿ ಅಧಿಕಾರಿಗಳ ಕಿರುಕುಳಕ್ಕೆ ಸಿಜೆ ರಾಯ್ ಬೇಸತ್ತಿದ್ದರು ಎನ್ನುವ ಮಾಹಿತಿಗಳು ಹರಿದಾಡುತ್ತಿದ್ದರೆ, ಮತ್ತೊಂದಡೆ ಸಿಜೆ ರಾಯ್ ತೆರಿಗೆ, ನಗದು ವ್ಯವಹಾರ, ಐಟಿ ರಿಟರ್ನ್ಸ್, ನಟಿಯರ ಜತೆಗಿನ ಲಿಂಕ್ ಕುರಿತ ಮಾತುಗಳು ಕೇಳಿಬರುತ್ತಿವೆ.
ಈ ಬೆಳವಣಿಗೆ ನಡುವೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಘೋಷಿಸಿದೆ. ಸಿಜೆ ರಾಯ್ ದುರಂತ ಸಾವು ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶ ನೀಡಿದ್ದಾರೆ.
ಎಸ್ಐಟಿ ರಚನೆ
ನಗರ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸಿದೆ.
ಸಿಜೆ ರಾಯ್ ಸಾವು ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಉದ್ಯಮಿ ಸಾವಿನ ಕುರಿತು ಸಂಪೂರ್ಣ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಲಾಗಿದೆ. ಪ್ರಕ್ರರಣದ ಸಂಪೂರ್ಣ ತನಿಖೆ ನಡೆಸಿ ಎಸ್ಐಟಿ ತಂಡ ವರದಿ ನೀಡಲಿದೆ ಎಂದಿದ್ದಾರೆ.
ಸಿಜೆ ರಾಯ್ ಸಾವು ಪ್ರಕರಣದ ಎಸ್ಐಟಿ ತಂಡಕ್ಕೆ ವಂಶಿಕೃಷ್ಣ ನೇತೃತ್ವ ವಹಿಸಿದರೆ, ತಂಡದಲ್ಲಿ ಕೆಂದ್ರ ವಿಭಾಗ ಡಿಸಿಪಿ ಅಕ್ಷಯ್, ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ ಹಾಗೂ ಅಶೋಕನಗರ ಇನ್ಸ್ಪೆಕ್ಟರ್ ರವಿ ಈ ತಂಡದಲ್ಲಿದ್ದಾರೆ. ಉನ್ನತ ಮಟ್ಟದ ತನಿಖೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ ಎಂದು ಪರಮೇಶ್ವರ ಹೇಳಿದರು.
ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು; ಸಿಜೆ ರಾಯ್ ನೆನೆದು ಹನುಮಂತ ಭಾವುಕ
Mystery ಸಿಜೆ ರಾಯ್ ಡೈರಿಯಲ್ಲಿ ಶಾಸಕರು, ಸಂಸದರ ಹೆಸರು! ಸಾಯುವ ಮುನ್ನ 15 ನಿಮಿಷ ಮಾತಾಡಿದ್ದು ಯಾರ ಜತೆ?