Subscribe ನ್ಯೂಸಿಕ್ಸ್ ಕನ್ನಡ
newsics.com
ನಟಿ ಐಶ್ವರ್ಯ ರಾಜೇಶ, ತಮಿಳು, ತೆಲುಗು ಹಾಗೂ ಮಲೆಯಾಳಂನಲ್ಲಿ ಅಭಿನಯಿಸುವ ಮೂಲಕ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಐಶ್ವರ್ಯ ರಾಜೇಶ್, ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ ಎದುರಾದ ಅತ್ಯಂತ ಕಹಿ ಘಟನೆಯೊಂದನ್ನು ಬಹಿರಂಗ ಪಡಿಸಿದ್ದಾರೆ. ಮೀಡಿಯಾ ಇಂಡಸ್ಟ್ರಿಯಲ್ಲಿ ಎಂತಹ ಕೊಳಕು ಜನರಿರುತ್ತಾರೆ ಎನ್ನುವುದನ್ನು ಐಶ್ವರ್ಯ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ತಾವು ಆರಂಭದ ದಿನಗಳಲ್ಲಿ ಅನುಭವಿಸಿದ ಕಿರುಕುಳಗಳನ್ನು ಮೆಲುಕು ಹಾಕಿದ್ದಾರೆ.
ಅನೇಕ ಉದಯೋನ್ಮುಖ ನಟಿಯರು ವೃತ್ತಿಜೀವನವನ್ನು ಮುಂದುವರಿಸುವಾಗ ಇದನ್ನು ಎದುರಿಸಬೇಕಾಗುತ್ತದೆ. ನಿಖಿಲ್ ವಿಜಯೇಂದ್ರ ಸಿಂಹ ಅವರ ಪಾಡ್ಕಾಸ್ಟ್ನಲ್ಲಿ ಛಾಯಾಗ್ರಾಹಕನ ಬಗ್ಗೆ ಆಘಾತಕಾರಿ ವಿಚಾರವೊಂದನ್ನು ಐಶ್ವರ್ಯ ಬಹಿರಂಗಪಡಿಸಿದ್ದಾರೆ. ಆ ಸಮಯದಲ್ಲಿ ನಾನು ತುಂಬಾ ಚಿಕ್ಕವಳಿದ್ದೆ. ಹಾಗೆಯೇ ಈ ಉದ್ಯಮಕ್ಕೆ ಹೊಸಬಳಾಗಿದ್ದೆ. ಚಿತ್ರೀಕರಣದ ಸಮಯದಲ್ಲಿ ನಾನು ನನ್ನ ಸಹೋದರನನ್ನು ಕರೆದುಕೊಂಡು ಹೋಗಿದ್ದೆ. ಆ ಸಂದರ್ಭದ ಆದ ಘಟನೆ ನನ್ನನ್ನು ತುಂಬಾ ನೋಯಿಸಿತು ಎಂದು ಐಶ್ವರ್ಯ ರಾಜೇಶ್ ಹೇಳಿದ್ದಾರೆ.
ಛಾಯಾಗ್ರಾಹಕ ನನ್ನ ಸಹೋದರನನ್ನು ಹೊರಗೆ ಕುಳಿತುಕೊಳ್ಳಲು ಹೇಳಿದ. ನಂತರ ನನ್ನನ್ನು ಒಳಗೆ ಕರೆದೊಯ್ದ. ಅವನು ನನ್ನ ಬಟ್ಟೆಯಿಲ್ಲದೇ ಬಾಡಿ ತೋರಿಸಲು ಹೇಳಿದ ಎಂದು ಆ ಕಹಿ ಘಟನೆಯನ್ನು ವಿವರಿಸಿದ್ದಾರೆ.