Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3 ಮಕ್ಕಳನ್ನು ನೇಣಿಗೇರಿಸಿ ಕೊಲೆಗೈದು ಹೊಟ್ಟೆತುಂಬಾ ಡೀಸೆಲ್ ಕುಡಿದ ತಾಯಿ; ಮುಂದೆನಾಯ್ತು?
ಕರ್ನಾಟಕಪ್ರಮುಖ

3 ಮಕ್ಕಳನ್ನು ನೇಣಿಗೇರಿಸಿ ಕೊಲೆಗೈದು ಹೊಟ್ಟೆತುಂಬಾ ಡೀಸೆಲ್ ಕುಡಿದ ತಾಯಿ; ಮುಂದೆನಾಯ್ತು?

Share
1 Min Read
SHARE

ಬಾಗಲಕೋಟೆ: ಮೂರು ಮಕ್ಕಳನ್ನು ಸ್ವತಃ ತಾಯಿಯೇ ನೇಣು ಬಿಗಿದು ಕೊಲೆಗೈದು, ತಾನೂ ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆಯ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ
ರೂಪಾ ಹನುಮಂತಗೌಡರ (27) ಎಂಬುವವರೇ ಈ ಕೃತ್ಯ ಎಸಗಿದ ಗೃಹಿಣಿ. ಇವರು ತಮ್ಮ ಮೂರು ಮಕ್ಕಳಾದ ಸಮೃದ್ಧಿ (5), ಪ್ರೀತಮ್ (4) ಮತ್ತು ಸುಕ್ಷಿತ್ (2) ಅವರನ್ನು ಮನೆಯ ಜಂತಿಗೆ ನೇಣು ಹಾಕಿ ಕೊಲೆ ಮಾಡಿದ್ದಾರೆ. ಮಕ್ಕಳ ಪ್ರಾಣ ಹೋದ ನಂತರ ತಾನೂ ಸಾಯಬೇಕೆಂಬ ನಿರ್ಧಾರದಿಂದ ರೂಪಾ ಅವರು ಡೀಸೆಲ್ ಕುಡಿದು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ರೂಪಾ ಪ್ರಾಣಾಪಾಯದಿಂದ ಪಾರಾಗಿದ್ದು, ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಮೂವರು ಮುಗ್ಧ ಮಕ್ಕಳು ಪ್ರಾಣ ಕಳೆದುಕೊಂಡಿರುವುದು ನೋಡುಗರ ಎದೆಯನ್ನೇ ನಡುಗಿಸುವಂತಿದೆ.
ಅತ್ತೆಯ ಕಿರುಕುಳವೇ ಕಾರಣ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಅತ್ತೆ ರೇಣವ್ವ ಅವರ ಕಿರುಕುಳವೇ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. 2018ರ ಡಿಸೆಂಬರ್ 10ರಂದು ಹನುಮಂತ ಗೌಡರ ಜೊತೆ ರೂಪಾ ಅವರ ವಿವಾಹವಾಗಿತ್ತು. ಹನುಮಂತ ಅವರು ಬಾದಾಮಿಯ ಫೈನಾನ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಸಾರ ಸಾಗಿಸುತ್ತಿದ್ದರು. ಆದರೆ, ಮದುವೆಯಾದಾಗಿನಿಂದಲೂ ಅತ್ತೆ ರೇಣವ್ವ ಮತ್ತು ಸೊಸೆ ರೂಪಾ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಈ ಜಗಳ ಮಿತಿಮೀರಿತ್ತು. ಅತ್ತೆಯ ನಿತ್ಯದ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದ ಬೇಸತ್ತ ರೂಪಾ, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿ ರೂಪಾ ಅವರ ಹೇಳಿಕೆಯನ್ನು ಆಧರಿಸಿ ಹಾಗೂ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ತನಿಖೆಯ ನಂತರವಷ್ಟೇ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರಬರಬೇಕಿದೆ.

TAGGED:drinks diesel; further actionMother hangs 3 childrenmurders them
Share This Article
Facebook Twitter Copy Link Print
Previous Article ರಶ್ಮಿಕಾ ಮಂದಣ್ಣ ಮದುವೆ ಡೇಟ್ ಚೇಂಜ್; ಇದೇ ತಿಂಗಳಲ್ಲೇ ಮುಹೂರ್ತ: ಯಾವಗ?
Next Article ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರೆಗೆ ಭಂಗ ತರಬಹುದು ಎಚ್ಚರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?