https://youtu.be/yWrDals90_k?si=OdfGNSc1wAHnBuLm
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಗಳ ಮುಂದೆ ಓಡಾಡುತ್ತಿರುವ ಚಿರತೆ ಕಂಡು ಬೆಂಗಳೂರಿನ ಜನರು ಬೆಚ್ಚಿ ಬಿದ್ದಿದಾರೆ
ಬೆಂಗಳೂರಿನ ಅಂಜನಾಪುರದ 7ನೇ ಬ್ಲಾಕ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಚಿರತೆ ಮನೆಗಳ ಮುಂದೆ ಓಡಾಟ ನಡೆಸಿದೆ. ತುರೆಹಳ್ಳಿ ಅರಣ್ಯ ಪ್ರದೇಶ ಸಮೀಪವಿರುವುದರಿಂದ ಅಲ್ಲಿಂದಲೇ ಚಿರತೆ ಬಂದಿರುವ ಸಾಧ್ಯತೆ ಇದೆ.
ಮನೆಯಿಂದ ಹೊರಬರಲು ನಿವಾಸಿಗಳು ಭಯಪಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಒಟ್ಟಾರೆ ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೂ ಚಿರತೆ ಆಗಮಿಸಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ.
https://www.newsics.com/2026/02/03/boy-who-gave-rs-85-lakh-as-a-gift-for-free-momos/