Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಧಿಕಾರದ ಆಸೆಗೆ ಆರು ವರ್ಷದ ಮಗಳನ್ನುಕಾಲುವೆಗೆ ನೂಕಿ ಕೊಲೆ ಮಾಡಿದ ತಂದೆ
ದೇಶಪ್ರಮುಖ

ಅಧಿಕಾರದ ಆಸೆಗೆ ಆರು ವರ್ಷದ ಮಗಳನ್ನುಕಾಲುವೆಗೆ ನೂಕಿ ಕೊಲೆ ಮಾಡಿದ ತಂದೆ

Share
1 Min Read
SHARE

https://youtube.com/shorts/2Z4I0oFUbOQ?si=_eiZr2Y6IgPak8NX

Subscribe ನ್ಯೂಸಿಕ್ಸ್ ಕನ್ನಡ

newsics.com

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವ ಸಲುವಾಗಿ, ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ.

ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೇರೂರ್ ಗ್ರಾಮದ ನಿವಾಸಿ ಪಾಂಡುರಂಗ ಕೊಂಡಮಂಗಲೆ ಎಂಬಾತ ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದ. ಈತನಿಗೆ ಒಬ್ಬ ಮಗ ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು.

ಮಹಾರಾಷ್ಟ್ರದ ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ, ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಮುಂಬರುವ ಜೂನ್ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿ ಸರಪಂಚನಾಗಬೇಕೆಂಬ ಹಂಬಲ ಹೊಂದಿದ್ದ ಪಾಂಡುರಂಗನಿಗೆ ಮೂರು ಮಕ್ಕಳಿರವುದು ದೊಡ್ಡ ಅಡ್ಡಿಯಾಗಿತ್ತು.

ಪಾಂಡುರಂಗ ತನ್ನ ಸ್ನೇಹಿತ ಹಾಗೂ ಹಾಲಿ ಸರಪಂಚ ಗಣೇಶ್ ರಾಮಚಂದ್ರ ಶಿಂಧೆ ಬಳಿ ಸಲಹೆ ಕೇಳಿದ್ದ. ಮೊದಲು ಮಗುವನ್ನು ದತ್ತು ನೀಡಲು ಯೋಚಿಸಿದರಾದರೂ, ಜನ್ಮ ಪ್ರಮಾಣಪತ್ರದಲ್ಲಿ ತಂದೆಯ ಹೆಸರಿರುವುದರಿಂದ ಅದು ಕಾನೂನುಬದ್ಧವಾಗಿ ಚುನಾವಣೆಗೆ ಅಡ್ಡಿಯಾಗಬಹುದು ಎಂದು ಭಾವಿಸಿದರು.

ಜನವರಿ 29 ರಂದು ಪಾಂಡುರಂಗ ತನ್ನ ಮಗಳಾದ ಪ್ರಾಚಿಯನ್ನು ಬೈಕ್‌ನಲ್ಲಿ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ನಿಜಾಮ್ ಸಾಗರ್ ಕಾಲುವೆ ಬಳಿ ಕರೆದೊಯ್ದಿದ್ದಾನೆ. ಅಲ್ಲಿ ಯಾರು ಇಲ್ಲದ ಸಮಯ ನೋಡಿ ಮಗುವನ್ನು ಕಾಲುವೆಗೆ ನೂಕಿ ಅಲ್ಲಿಂದ ಪರಾರಿಯಾಗಿದ್ದಾನೆ. ಹತ್ತಿರದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಶಬ್ದ ಕೇಳಿ ಬರುವಷ್ಟರಲ್ಲಿ ಮಗು ನೀರಿನಲ್ಲಿ ಮುಳುಗಿ ಮೃತಪಟ್ಟಿತ್ತು.

ತೆಲಂಗಾಣ ಪೊಲೀಸರಿಗೆ ಅಪರಿಚಿತ ಮಗುವಿನ ಶವ ಸಿಕ್ಕಾಗ, ಕಾನ್ಸ್ಟೇಬಲ್ ಒಬ್ಬರು ಮಗುವಿನ ಫೋಟೋವನ್ನು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇದನ್ನು ನೋಡಿದ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಇದು ಪಾಂಡುರಂಗನ ಮಗಳು ಎಂದು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪಾಂಡುರಂಗನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಆತ ತನ್ನ ರಾಜಕೀಯ ಆಸೆಗಾಗಿ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸದ್ಯ ಪಾಂಡುರಂಗ ಮತ್ತು ಆತನಿಗೆ ಸಹಕರಿಸಿದ ಸರಪಂಚ ಗಣೇಶ್ ಶಿಂಧೆಯನ್ನು ಪೊಲೀಸರು ಬಂಧಿಸಿದ್ದಾರೆ.

https://www.newsics.com/2026/02/04/high-court-orders-famous-actor-rajpal-yadav-to-surrender-to-police/

TAGGED:Father kills six-year-old daughter by pushing her into a canal for power
Share This Article
Facebook Twitter Copy Link Print
Previous Article ಪ್ರಖ್ಯಾತ ನಟ ರಾಜ್‌ಪಾಲ್ ಯಾದವ್‌ಗೆ ಪೊಲೀಸರಿಗೆ ಶರಣಾಗುವಂತೆ ಹೈಕೋರ್ಟ್ ಆದೇಶ – ಕಾರಣವೇನು?
Next Article ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್’ಗಿರಿ – ಮುಸ್ಲಿಂ ಯುವತಿ-ಹಿಂದೂ ಯುವಕ ಅಡ್ಡಗಟ್ಟಿ ಕಿರಿಕ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?