https://youtube.com/shorts/kv9in5qxZnE?si=xMEQPbw5L2rTAx6o
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ನಿರ್ದೇಶಕ ನಂದಕಿಶೋರ್ ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ.
ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
https://www.newsics.com/2026/02/06/kirik-beauty-samyuktha-hegde-looks-super-hot-even-in-a-saree/