https://youtube.com/shorts/1QBsT4fM7Oc?si=2UevBtM7l5058Pmp
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿದ್ದಾರೆ.
ಮಂಗಳವಾರ ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ ಅವರಿಗೆ ಸಂಬಂಧಿಸಿದ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಸಿದ್ದರಾಮಯ್ಯ ಇಂದೇ ನಡೆಸಲಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಇಲಾಖೆಯಲ್ಲಿ ಕೆಲಸಗಳು ಉತ್ತಮವಾಗಿ ನಡೆಯುತ್ತಿವೆ. ಮುಖ್ಯಮಂತ್ರಿ ಜಲಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ನಮ್ಮಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಅವರೊಂದಿಗೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲವೂ ಯೋಜನಾಬದ್ಧವಾಗಿರುವ ಕಾರಣ ಇಲಾಖೆಯಲ್ಲಿ ಹೆಚ್ಚಿನ ಕೆಲಸ ಏನೂ ಇಲ್ಲ ಎಂದರು.
ಕೇಂದ್ರ ಸಚಿವರು, ಪಕ್ಷದ ಕಾನೂನು ತಂಡ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಕೇಂದ್ರ ಸಚಿವರು, ನಮ್ಮ ಕಾನೂನು ತಂಡ, ಕಾಂಗ್ರೆಸ್ ನಾಯಕರು ಮತ್ತು ನನಗೆ ಕರೆ ಮಾಡಿರುವ ವರಿಷ್ಠರನ್ನು ಭೇಟಿ ಮಾಡುತ್ತೇನೆ ಎಂದರು. ಆದರೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡ್ತೀರಾ ಎಂಬ ಪ್ರಶ್ನೆಗೆ ಅದೆಲ್ಲವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಮಾಧ್ಯಮದವರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಡಿಕೆ ಶಿವಕುಮಾರ್, “ನಿಮಗೆ ಯಾಕೆ ಇಷ್ಟೊಂದು ಕುತೂಹಲ? ನಾನೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ. ಕೆಪಿಸಿಸಿ ಅಧ್ಯಕ್ಷನಾಗಿ ಮಾರ್ಚ್ 6ಕ್ಕೆ ಆರು ವರ್ಷ ಪೂರೈಸಲಿದ್ದೇನೆ. ನಮ್ಮ ವಿರೋಧ ಪಕ್ಷದ ನಾಯಕ, ಮುಖಂಡರು, ಸಂಸದರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಅವರನ್ನು ಭೇಟಿಯಾಗುತ್ತಲೇ ಇರುತ್ತೇನೆ, ನನ್ನ ಕಷ್ಟ-ನಲಿವುಗಳನ್ನು ಹಂಚಿಕೊಳ್ಳುತ್ತೇನೆ ಎಂದು ಹೇಳಿದರು.
ಮಹಿಳೆಯರ ಗರ್ಭಾಶಯ ಸೇರುತ್ತಿದೆ ಮೈಕ್ರೋಪ್ಲಾಸ್ಟಿಕ್ : ಸಂಶೋಧನೆಯಲ್ಲಿ ಅಘಾತಕಾರಿ ಅಂಶ ಬಯಲು
ಮನೆಯಲ್ಲಿ ಹೀಗೆಲ್ಲಾ ಆಗ್ತಿದ್ರೆ ನಿಮ್ಮ ಸುತ್ತಮುತ್ತವೇ ದೆವ್ವ ಇರೋದು ಫಿಕ್ಸ್!