Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ವೆಗೆ ಹುಡುಗಿ ಸಿಕ್ತಿಲ್ಲಾಂತ ಬ್ರೋಕರ್ ಮಾತು ಕೇಳುವ ಯುವಕರೇ ಹುಷಾರ್ : 2 ಮಕ್ಕಳ ತಾಯಿ ಜೊತೆ ಮದುವೆ
ಕರ್ನಾಟಕಪ್ರಮುಖ

ಮದ್ವೆಗೆ ಹುಡುಗಿ ಸಿಕ್ತಿಲ್ಲಾಂತ ಬ್ರೋಕರ್ ಮಾತು ಕೇಳುವ ಯುವಕರೇ ಹುಷಾರ್ : 2 ಮಕ್ಕಳ ತಾಯಿ ಜೊತೆ ಮದುವೆ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಹಾವೇರಿ: ಖತರ್ನಾಕ್ ಗ್ಯಾಂಗ್‌ವೊಂದು ಯುವಕನಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿ ಮದುವೆ ಮಾಡಿಸಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ.

ತುಮ್ಮಿನಕಟ್ಟಿ ಗ್ರಾಮದ ರವೀಂದ್ರ ಜವಳಿ ಎಂಬ ಯುವಕ ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು. ಇದನ್ನು ತಿಳಿದ ಬ್ರೋಕರ್, ರೇಖಾ ಎಂಬಾಕೆಯನ್ನು ಪರಿಚಯಿಸಿದ್ದಾರೆ. ರೇಖಾ ನೋಡಲು ಲಕ್ಷಣವಾಗಿದ್ದಾಳೆಂದು ನಂಬಿದ ರವೀಂದ್ರ ಮತ್ತು ಅವರ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ನೀಡಿದ್ದಾರೆ.

ಈ ಐನಾತಿ ಲೇಡಿ ಮತ್ತು ಆಕೆಯ ಗ್ಯಾಂಗ್ ಮದುವೆಗೆ ಮುನ್ನವೇ ವಧುದಕ್ಷಣೆಯ ಹೆಸರಿನಲ್ಲಿ ರವೀಂದ್ರ ಅವರಿಂದ ಬರೋಬ್ಬರಿ 2.5 ಲಕ್ಷ ರೂಪಾಯಿ ಹಣವನ್ನು ಪೀಕಿದ್ದಾರೆ. ಅಷ್ಟೇ ಅಲ್ಲದೆ, ವಯಸ್ಸಿನ ವ್ಯತ್ಯಾಸ ತಿಳಿಯಬಾರದೆಂದು ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕವನ್ನೇ ಎಡಿಟ್ ಮಾಡಿ ವಂಚಿಸಿದ್ದರು. ಇಬ್ಬರು ಮಕ್ಕಳ ತಾಯಿಯಾಗಿದ್ದ ರೇಖಾ, ತಾನು ಕನ್ಯೆ ಎಂದು ನಂಬಿಸಿ ರವೀಂದ್ರ ಅವರೊಂದಿಗೆ ವೈವಾಹವಾಗಿದ್ದಾರೆ.

ಮದುವೆಯಾಗಿ ಕೇವಲ ಐದು ದಿನಗಳು ಕಳೆದಿರಲಿಲ್ಲ, ಅಷ್ಟರಲ್ಲೇ ಈ ಯುವತಿಯ ಅಸಲಿ ಮುಖವಾಡ ಕಳಚಿ ಬಿದ್ದಿದೆ. ಮನೆಗೆ ಬಂದಿದ್ದ ರೇಖಾಳಿಗೆ ಆಕೆಯ ಮಕ್ಕಳು ಫೋನ್ ಮಾಡಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಿದ್ದಾಗ ಬಂದ ಅನುಮಾನದಿಂದ ರವೀಂದ್ರ ರೇಖಾಳನ್ನು ವಿಚಾರಿಸಿದ್ದಾರೆ. ಬಳಿಕ ತನಗೆ ಈಗಾಗಲೇ ಎರಡು-ಮೂರು ಮದುವೆಯಾಗಿರುವುದು ಮತ್ತು ಇಬ್ಬರು ಮಕ್ಕಳಿರುವ ಸತ್ಯವನ್ನು ಆಕೆ ಒಪ್ಪಿಕೊಂಡಿದ್ದಾಳೆ.

ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ರೇಖಾ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾಳೆ. ಗ್ರಾಮದಿಂದ ಸುಮಾರು 2 ಕಿಲೋಮೀಟರ್ ದೂರದವರೆಗೂ ಓಡಿ ಹೋಗಿದ್ದಾಳೆ. ಆದರೆ ಬಿಡದ ರವೀಂದ್ರ ಮತ್ತು ಗ್ರಾಮಸ್ಥರು ಆಕೆಯನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸದ್ಯ  ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

https://www.newsics.com/2026/02/11/team-indias-abhishek-sharmas-health-deteriorates-admitted-to-hospital/

TAGGED:Married to a mother of 2 children
Share This Article
Facebook Twitter Copy Link Print
Previous Article ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
Next Article ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್‌ ಗ್ಯಾಂಗ್‌ ಸದಸ್ಯ ಹೈಕೋರ್ಟ್‌ ಮೊರೆ; ಅರ್ಜಿ ವಾಪಸು ಪಡೆಯುವುದು ಒಳಿತು ಎಂದ ಕೋರ್ಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?